ಡಿ ಎಂ ಕೆ ಮುಖಂಡ ಸ್ಟಾಲಿನ್ 
ಪ್ರಧಾನ ಸುದ್ದಿ

ಜನರ ತೊಂದರೆಯ ಬಗ್ಗೆ ಸಹಾನುಭೂತಿ ಕೂಡ ತೋರಿಸದ ಜಯಲಲಿತಾ: ಸ್ಟಾಲಿನ್

ತಮಿಳುನಾಡು ವಿಧಾನಸಭಾ ವಿರೋಧಪಕ್ಷದ ಅಧ್ಯಕ್ಷ, ಡಿ ಎಂ ಕೆ ಮುಖಂಡ ಸ್ಟಾಲಿನ್, ನೋಟು ಹಿಂಪಡೆತದಿಂದ ತೊಂದರೆಗೆ ಒಳಗಾಗಿರುವ ಜನರ ತೊಂದರೆಗಳಿಗೆ ಮುಖ್ಯಮಂತ್ರಿ ಜಯಲಲಿತಾ

ಚೆನ್ನೈ: ತಮಿಳುನಾಡು ವಿಧಾನಸಭಾ ವಿರೋಧಪಕ್ಷದ ಅಧ್ಯಕ್ಷ, ಡಿ ಎಂ ಕೆ ಮುಖಂಡ ಸ್ಟಾಲಿನ್, ನೋಟು ಹಿಂಪಡೆತದಿಂದ ತೊಂದರೆಗೆ ಒಳಗಾಗಿರುವ ಜನರ ತೊಂದರೆಗಳಿಗೆ ಮುಖ್ಯಮಂತ್ರಿ ಜಯಲಲಿತಾ ಸಹಾನುಭೂತಿ ಕೊಡ ತೋರಿಸದೆ, ಕೇವಲ ಮತಗಳ ಬಗ್ಗೆ ಚಿಂತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. 
ಭಾನುವಾರ ಜಯಲಲಿತಾ ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದ ಸ್ಟಾಲಿನ್ ಜನರಿಗೆ ಸದ್ಯಕ್ಕೆ ಹಣ ದೊರೆಯದೆ ಅಗತ್ಯ ವಸ್ತುಗಳನ್ನು ಕೂಡ ಕೊಳ್ಳಲಾಗದೆ ಒದ್ದಾಡುತ್ತಿದ್ದಾರೆ ಮತ್ತು ಮುಖ್ಯಮಂತ್ರಿಯವರ ಮಾತುಗಳು ಜನರ ಈ ತೊಂದರೆಗೆ ಸಮಾಧಾನ ಕೂಡ ಹೇಳುವುದಿಲ್ಲ ಎಂದಿದ್ದಾರೆ. 
ಭಾನುವಾರ ಹೇಳಿಕೆ ನೀಡಿದ್ದ ಜಯಲಲಿತಾ, ಜನರ ಪ್ರಾರ್ಥನೆಯಿಂದಾಗಿ ಮರುಹುಟ್ಟು ಪಡೆದಿದ್ದೇನೆ ಎಂದಿದ್ದಲ್ಲದೆ ಮುಂದಿನ ಉಪ ಚುನಾವಣೆಗಳಲ್ಲಿ ಎ ಐ ಡಿ ಎಂ ಕೆ ಪಕ್ಷದ ಗೆಲುವಿಗಾಗಿ ಶ್ರಮಿಸುವಂತೆ ಜನರಲ್ಲಿ ಕೋರಿದ್ದರು. 
ಶೀಘ್ರ ಸಂಪೂರ್ಣ ಗುಣಮುಖವಾಗಿ ಮತ್ತೆ ಕೆಲಸಕ್ಕೆ ಹಾಜರಾಗಲು ಕಾಯುತ್ತಿದ್ದೇನೆ ಎಂದು ಕೂಡ ಅವರು ಹೇಳಿದ್ದರು. ಸೆಪ್ಟೆಂಬರ್ ೨೨ ರಿಂದ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಲಲಿತಾ ಅವರನ್ನು ಇನ್ನು ಡಿಸ್ಚಾರ್ಜ್ ಮಾಡಬೇಕಿದೆ. 
ಕೇಂದ್ರ ಸರ್ಕಾರದ ನೋಟು ಹಿಂಪಡೆತದ ನಿರ್ಧಾರವನ್ನು ಸ್ವಾಗತಿಸಿದ್ದರು ಇದರಿಂದ ಸಮಾನ್ಯ ಜನಕ್ಕೆ ಸಾಕಷ್ಟು ತೊಂದರೆಗಳಾಗಿವೆ ಎಂದಿದ್ದಾರೆ ಸ್ಟಾಲಿನ್. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT