ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಹಾಲು ಉತ್ಪಾದಕರ ಪ್ರೋತ್ಸಾಹ ಧನ ಒಂದು ರುಪಾಯಿ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಬರಗಾಲದ ಹಿನ್ನೆಲೆಯಲ್ಲಿ ರಾಜ್ಯದ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಒಂದು ರುಪಾಯಿ ಹೆಚ್ಚಿಸುವುದಾಗಿ...

ರಾಮನಗರ: ಬರಗಾಲದ ಹಿನ್ನೆಲೆಯಲ್ಲಿ ರಾಜ್ಯದ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಒಂದು ರುಪಾಯಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಘೋಷಿಸಿದ್ದಾರೆ.
ಇಂದು ರಾಮನಗರದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಸಿಎಂ, ನಮ್ಮದು ರೈತರ ಪರವಾದ ಸರ್ಕಾರ. ಅವರ ಕಷ್ಟಗಳಿಗೆ ನಾವು ಸ್ಪಂದಿಸುತ್ತೇವೆ.. ಪ್ರಸ್ತುತ ಲೀಟರ್ ಹಾಲಿಗೆ ನಾಲ್ಕು ರುಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಆದರೂ ಇನ್ನು ಎರಡು ರುಪಾಯಿ ಪ್ರೋತ್ಸಾಹ ಧನ ನೀಡಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಮತ್ತೆ ಒಂದು ರುಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದರು.
ಈ ಸಹಾಯಧನ ಹೆಚ್ಚಳದಿಂದ ನಿತ್ಯ 3.50 ಕೋಟಿ ರುಪಾಯಿ ರೈತರ ಬ್ಯಾಂಕ್ ಖಾತೆಗಳಿಗೆ ತಲುಪುತ್ತದೆ. ಹಾಲು ಉತ್ಪಾದಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಿಎಂ ಕರೆ ನೀಡಿದರು.
ಇದೇ ವೇಳೆ ನೋಟ್ ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ಸಿಎಂ, ಕೇಂದ್ರದ ಕ್ರಮದಿಂದಾಗಿ ಜನ ಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ರೈತರು, ಬಡವರು, ಕೂಲಿ ಕಾರ್ಮಿಕರು ತಮ್ಮ ಕೆಲಸಗಳನ್ನು ಬಿಟ್ಟು ಬ್ಯಾಂಕ್ ಗಳ ಮುಂದೆ ನಿಲ್ಲುವಂತಾಗಿದೆ. ಇದಕ್ಕೆ ಪೂರ್ವ ಸಿದ್ಧತೆಯ ಕೊರತೆ ಕಾರಣ ಎಂದರು. ಅಲ್ಲದೆ ಈ ಸಂಬಂಧ ತಾವು ಕೇಂದ್ರ ಹಣಕಾಸು ಸಚಿವರಿಗೆ ಪತ್ರಬರೆದಿರುವುದಾಗಿ ಹಾಗೂ ಆರ್ ಬಿಐ ಮುಖ್ಯಸ್ಥರಿಗೂ ಪತ್ರ ಬರೆಯುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT