ಸಂಸತ್ ಕಲಾಪ 
ಪ್ರಧಾನ ಸುದ್ದಿ

ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ, ರಾಜ್ಯಸಭೆ ಕಲಾಪ ಆರಂಭ

ಒಂದು ತಿಂಗಳ ಕಾಲ ನಡೆಯುವ ಚಳಿಗಾಲದ ಸಂಸತ್ ಕಲಾಪ ಇಂದು ಆರಂಭವಾಗಿದ್ದು, ದಿವಂಗತ ಮಾಜಿ ಲೋಕಸಭಾ ಸದಸ್ಯರಿಗೆ ಸಂತಾಪ ಸೂಚಿಸಿದ ಬಳಿಕ ಕಲಾಪವನ್ನು ನಾಳೆಗೆ ಸ್ಪೀಕರ್....

ನವದೆಹಲಿ: ತೀವ್ರ ಕುತೂಹಲದೊಂದಿಗೆ ಆರಂಭವಾದ ಲೋಕಸಭಾ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿದೆ.

ಒಂದು ತಿಂಗಳ ಕಾಲ ನಡೆಯುವ ಚಳಿಗಾಲದ ಸಂಸತ್ ಕಲಾಪ ಇಂದು ಆರಂಭವಾಗಿದ್ದು, ದಿವಂಗತ ಮಾಜಿ ಲೋಕಸಭಾ ಸದಸ್ಯರಿಗೆ ಸಂತಾಪ ಸೂಚಿಸಿದ ಬಳಿಕ ಕಲಾಪವನ್ನು ನಾಳೆಗೆ ಸ್ಪೀಕರ್ ಮುಂದೂಡಿದ್ದಾರೆ. ಕಳೆದ  ಆಗಸ್ಚ್ ತಿಂಗಳಲ್ಲಿ ಸಾವನ್ನಪ್ಪಿದ್ದ ಸಂಸದ ಟಿಎಂಸಿ ಸಂಸದೆ ರೇಣುಕಾ ಸಿನ್ಹಾ, ಮಾಜಿ ಸಂಸದ ಆರಿಫ್ ಬೇಗ್, ಪಿ. ಕಣ್ಣನ್, ಹರ್ಷವರ್ಧನ್, ಜಯವಂತಿಬೆನ್ ಮೆಹ್ತಾ ಹಾಗೂ ಉಷಾ ವರ್ಮಾ ಅವರಿಗೆ ಕಲಾಪದಲ್ಲಿ ಸಂತಾಪ ಸೂಚಿಸಿ  ಕಲಾಪವನ್ನು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ನಾಳೆಗೆ ಮುಂದೂಡಿದರು.

ಇದೇ ವೇಳೆ ಕಳೆದ ಸೆಪ್ಟೆಂಬರ್ 28ರಂದು ಸಾವನ್ನಪ್ಪಿದ ಇಸ್ರೇಲ್ ಮಾಜಿ ಅಧ್ಯಕ್ಷ ಶಿಮಾನ್ ಪೆರೆಸ್, ಅಕ್ಟೋಬರ್ 13ರಂದು ಮೃತರಾದ ಥಾಯ್ ಲೆಂಡ್ ರಾಜ ಭುಮಿಬೋಲ್ ಅದುಲ್ಯಡೆಜ್ ಮತ್ತು ಸ್ವಾಮಿನಾರಾಯಣ ಸಂಸ್ಥೆಯ  ಹಿರಿಯ ಸ್ಪಾಮಿಜಿ ನಾರಾಯಣ ಸ್ವರೂಪದಾಸ್ ಅವರ ಸಾವಿಗೆ ಸಂತಾಪ ಸೂಚಿಸಲಾಯಿತು.

ರಾಜ್ಯಸಭೆ ಕಲಾಪ ಆರಂಭ
ಇನ್ನುನೋಟು ನಿಷೇಧ ಕುರಿತ ಚರ್ಚೆಯನ್ನೇ ಪ್ರಮುಖವಾಗಿಟ್ಟುಕೊಂಡು ರಾಜ್ಯಸಭೆ ಕಲಾಪ ಆರಂಭವಾಗಿದ್ದು, ರಾಜ್ಯಸಭೆ ಉಪಾಧ್ಯಕ್ಷ ಪಿಜೆ ಕುರಿಯನ್ ಅವರ ಉಪಸ್ಥಿತಯಲ್ಲಿ ರಾಜ್ಯಸಭೆ ಕಲಾಪ ನಡೆಯುತ್ತಿದೆ. ಇಂದು ಸಂಜೆ 6  ಗಂಟೆಯವರೆಗೂ ರಾಜ್ಯಸಭೆ ಕಲಾಪ ನಡೆಯಲಿದ್ದು, ನೋಟುನಿಷೇಧವೇ ಪ್ರತಿಪಕ್ಷಗಳ ಪ್ರಮುಖ ಅಸ್ತ್ರವಾಗಿದೆ. ಇದೇ ವಿಚಾರದ ಹಿನ್ನಲೆಯಲ್ಲಿ ಇಂದು ಚರ್ಚೆ ನಡೆಯುತ್ತಿದ್ದು, ರಾಜ್ಯಸಭೆ ಉಪಾಧ್ಯಕ್ಷ ಪಿಜೆ ಕುರಿಯನ್ ಈ ವಿಚಾರದ  ಕುರಿತು ಮಾತ್ರ ಚರ್ಚಿಸುವಂತೆ ಸದಸ್ಯರಿಗೆ ನೋಟಿಸ್ ನೀಡಿದ್ದಾರೆ. ಪ್ರಮುಖ ಪ್ರತಿಪಕ್ಷಗಳಾದ ಕಾಂಗ್ರೆಸ್, ಟಿಎಂಸಿ, ಎಡಪಕ್ಷಗಳು ಹಾಗೂ ಜೆಡಿಯು ಸದಸ್ಯರು ನೋಟು ನಿಷೇಧ ಕುರಿತಂತೆ ಚರ್ಚಿಸುವಂತೆ ನೋಟಿಸ್ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT