ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕಾಣೆಯಾದ ಜೆ ಎನ್ ಯು ವಿದ್ಯಾರ್ಥಿಯ ಸುಳಿವಿಗೆ ಬಹುಮಾನ ಮೌಲ್ಯ ಹೆಚ್ಚಿಸಿದ ಪೊಲೀಸರು

ಒಂದು ತಿಂಗಳಿಂದ ಕಾಣೆಯಾಗಿರುವ ಜವಾಹಾರ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ನಜೀಬ್ ಅಹಮದ್ ಅವರ ಬಗ್ಗೆ ಮಾಹಿತಿ ನೀಡಿದರೆ ಈ ಮೊದಲು ೨ ಲಕ್ಷ ರೂ ಬಹುಮಾನ ಕೊಡುವುದಾಗಿ ಘೋಷಿಸಿದ್ದ ದೆಹಲಿ

ನವದೆಹಲಿ: ಒಂದು ತಿಂಗಳಿಂದ ಕಾಣೆಯಾಗಿರುವ ಜವಾಹಾರ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ನಜೀಬ್ ಅಹಮದ್ ಅವರ ಬಗ್ಗೆ ಮಾಹಿತಿ ನೀಡಿದರೆ ಈ ಮೊದಲು ೨ ಲಕ್ಷ ರೂ ಬಹುಮಾನ ಕೊಡುವುದಾಗಿ ಘೋಷಿಸಿದ್ದ ದೆಹಲಿ ಪೊಲೀಸರು ಈಗ ಅದನ್ನು ೫ ಲಕ್ಷಕ್ಕೆ ಹೆಚ್ಚಿಸಿದ್ದಾರೆ. 
"ಈ ಆದೇಶ ಈಗಿನಿಂದಲೇ ಜಾರಿಯಾಗಿದ್ದು, ಈ ಪ್ರಕರಣ ಬಗೆಹರಿಯುವವರೆಗೂ ಅಥವಾ ಕಾಣೆಯಾದ ವ್ಯಕ್ತಿಯನ್ನು ಕಂಡುಹಿಡಿಯುವವರೆಗೂ ಪ್ರಮಾಣದಲ್ಲಿರುತ್ತದೆ" ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. 
"ಕಾಣೆಯಾದ ವಿದ್ಯಾರ್ಥಿಯನ್ನು ಪತ್ತೆಹಚ್ಚಲು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಆದರೆ ಯಾವ ಸುಳಿವು ಸಿಕ್ಕಿಲ್ಲ" ಎಂದು ಹೇಳಿಕೆ ತಿಳಿಸಿದೆ. 
ಕಳೆದ ವಾರ ಈ ಪ್ರಕರಣವನ್ನು ದಕ್ಷಿಣ ದೆಹಲಿ ಪೊಲೀಸರಿಂದ ತೀವ್ರ ತನಿಖೆಗಾಗಿ ಕ್ರೈಮ್ ಬ್ರಾಂಚ್ ಗೆ ವರ್ಗಾಯಿಸಲಾಗಿತ್ತು. 
"ನಜೀಬ್ ಅಹಮದ್ ಬಗ್ಗೆ ಸುಳಿವು ನೀಡುವವರಿಗೆ ಸಿಗುವ ಬಹುಮಾನ ಮೊತ್ತವನ್ನು ೫ ಲಕ್ಷಕ್ಕೆ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹೆಚ್ಚಿಸಿದ್ದಾರೆ" ಎಂದು ಜಂಟಿ ಪೊಲೀಸ್ ಆಯುಕ್ತ (ಕ್ರೈಮ್ ಘಟಕ) ಧೃಢೀಕರಿಸಿದ್ದಾರೆ. 
ಮೊದಲ ವರ್ಷದ ಎಂ ಎಸ್ ಸಿ ಬಯೋಟೆಕ್ನಾಲಜಿ ವಿದ್ಯಾರ್ಥಿ ನಜೀಬ್ ಜಂಗ್ ಅಕ್ಟೋಬರ್ ೧೫ ರಂದು ಆರ್ ಎಸ್ ಎಸ್ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಸದಸ್ಯರ ಜೊತೆಗೆ ಘರ್ಷಣೆ ಮಾಡಿಕೊಂಡ ನಂತರ ಕಾಣೆಯಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT