ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ನಾಲ್ಕು ತಿಂಗಳ ಗಲಭೆಯುಕ್ತ ವಾತಾವರಣದಿಂದ ಸಹಜಸ್ಥಿತಿಗೆ ಮರಳಿದ ಕಾಶ್ಮೀರ

೧೩೨ ದಿನಗಳಿಂದ ಬಂದ್ ಆಗಿದ್ದ ಕಾಶ್ಮೀರ ಕಣಿವೆ ಶನಿವಾರದಿಂದ ಮತ್ತೆ ಜೀವಂತವಾಗಿ ಚಟುವಟಿಕೆಯಿಂದ ಕೂಡಿದೆ. ರಸ್ತೆಯ ಮೇಲೆ ಹಲವಾರು ವಾಹನಗಳು ಓಡಾಡುತ್ತಿದ್ದು, ಮಾರುಕಟ್ಟೆಗಳು, ಶಾಲೆಗಳು

ಶ್ರೀನಗರ: ೧೩೨ ದಿನಗಳಿಂದ ಬಂದ್ ಆಗಿದ್ದ ಕಾಶ್ಮೀರ ಕಣಿವೆ ಶನಿವಾರದಿಂದ ಮತ್ತೆ ಜೀವಂತವಾಗಿ ಚಟುವಟಿಕೆಯಿಂದ ಕೂಡಿದೆ. ರಸ್ತೆಯ ಮೇಲೆ ಹಲವಾರು ವಾಹನಗಳು ಓಡಾಡುತ್ತಿದ್ದು, ಮಾರುಕಟ್ಟೆಗಳು, ಶಾಲೆಗಳು ಮತ್ತು ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. 
ನೋಟು ಹಿಂಪಡೆತದ ಬಿಸಿ ತಟ್ಟಿದ್ದರೂ ಶ್ರೀನಗರದ ಮಾರುಕಟ್ಟೆಗಳಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗಾರರು ಭಾಗಿಯಾಗಿದ್ದಾರೆ. 
ಇಂದು ಬೆಳಗಿನಿಂದಲೇ ಬಸ್ ಗಳು ಮತ್ತು ಇತರ ಸಾರ್ವಜನಿಕ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಜನರು ತಮ್ಮ ಹಣ ಹಿಂಪಡೆಯಲು ಬ್ಯಾಂಕ್ ಮತ್ತು ಎಟಿಎಂಗಳ ಮುಂದೆ ಸಾಲುಗಟ್ಟುತ್ತಿರುವುದು ಕೂಡ ಸಾಮಾನ್ಯವಾಗಿದೆ. 
ಗಲಭೆ ಪ್ರರಾಂಭವಾದಾಗಿಲಿಂದಲೂ ಮೊದಲ ಬಾರಿಗೆ ಸರ್ಕಾರಿ ಕಚೇರಿಗಳು, ಬ್ಯಾಂಕ್ ಗಳು ಮತ್ತು ಅಂಚೆ ಕಚೇರಿಗಳು ಹಾಜರಿ ಬಹುತೇಕ ಸಂಪೂರ್ಣವಾಗಿದೆ. 
ಜುಲೈ ೮ ರಿಂದ ಹಿಜಬುಲ್ ಕಮ್ಯಾಂಡರ್ ಬುರ್ಹಾನ್ ವಾನಿಯನ್ನು ಭದ್ರತಾ ಪಡೆಗಳು ಹತ್ಯೆಗೈದಾಗಿಲಿಂದಲೂ ಪ್ರಾರಂಭವಾಗಿದ್ದ ಹಿಂಸಾಚಾರದಿಂದ ೧೦೦ ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು. ಪ್ರತಿಭಟನೆಗಳನ್ನು ಮುನ್ನಡೆಸುತ್ತಿದ್ದ ಪ್ರತ್ಯೇಕವಾದಿ ನಾಯಕರು ಎರಡು ದಿನಗಳವರೆಗೆ ಪ್ರತಿಭಟನೆಗಳನ್ನು ಹಿಂಪಡೆದಿದ್ದು, ವಾರಾಂತ್ಯದಲ್ಲಿ ಸಾಮಾನ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಹೇಳಿದ್ದಾರೆ. 
ಅಧಿಕಾರಿಗಳು ಕೂಡ ಶನಿವಾರ ಯಾವುದೇ ಪ್ರದೇಶದಲ್ಲಿ ನಿರ್ಬಂಧಗಳನ್ನು ಹೇರಿಲ್ಲ. ಶ್ರೀನಗರದಲ್ಲಿ ಹಲವು ಕಡೆ ವಾಹನ ದಟ್ಟಣೆ ಕೂಡ ಕಂಡುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT