ಎಎಪಿ ಮುಖಂಡ ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ನೋಟು ಹಿಂಪಡೆತ ಅವ್ಯವಸ್ಥೆ ವಿರೋಧಿಸಿ ಸಂಸತ್ತಿಗೆ ಮುತ್ತಿಗೆ ಹಾಕಲಿರುವ ಎಎಪಿ

೫೦೦ ಮತ್ತು ೧೦೦೦ ರೂ ನೋಟುಗಳನ್ನು ಹಿಂದಕ್ಕೆ ಪಡೆದಿರುವ ಕೇಂದ್ರ ಸರ್ಕಾರದ ನಿರ್ಧಾರ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳಿಗೆ ಸಹಾಯ ಮಾಡಲು ತೆಗೆದುಕೊಂಡಿರುವ ನಡೆ,

ನವದೆಹಲಿ: ೫೦೦ ಮತ್ತು ೧೦೦೦ ರೂ ನೋಟುಗಳನ್ನು ಹಿಂದಕ್ಕೆ ಪಡೆದಿರುವ ಕೇಂದ್ರ ಸರ್ಕಾರದ ನಿರ್ಧಾರ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳಿಗೆ ಸಹಾಯ ಮಾಡಲು ತೆಗೆದುಕೊಂಡಿರುವ ನಡೆ, ಇದರಿಂದ ಕಪ್ಪು ಹಣ ಹಿಂದಿರುಗುವುದಿಲ್ಲ ಎಂದು ಆರೋಪಿಸಿ ಮಂಗಳವಾರ ಸಂಸತ್ತಿಗೆ ಮುತ್ತಿಗೆ ಹಾಕುವುದಾಗಿ ಆಮ್ ಆದ್ಮಿ ಪಕ್ಷ ಘೋಷಿಸಿದೆ. 
"ನಾವು ಸಂಸತ್ ಭವನಕ್ಕೆ ನಡೆದು, ಉಪಮುಖ್ಯಮಂತ್ರಿ ಮನೀಶ್ ಸಿಸೋಧಿಯಾ ನೇತೃತ್ವದಲ್ಲಿ ಮುತ್ತಿಗೆ ಹಾಕಲಿದ್ದೇವೆ" ಎಂದು ಎಎಪಿ ಪಕ್ಷದ ಮುಖಂಡರಾದ ಆಶಿಶ್ ಕೇತನ್ ಮತ್ತು ದಿಲೀಪ್ ಪಾಂಡೆ ಮಾಧ್ಯಮಗಳಿಗೆ ಹೇಳಿದ್ದಾರೆ. 
ನೋಟು ಹಿಂಪಡೆತದ ನಿರ್ಧಾರದ ವಿರುದ್ಧ ಹೋರಾಟ ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ನಮ್ಮ ಪ್ರಮುಖ ವಿಷಯಗಳಲ್ಲಿ ಒಂದು ಎಂದು ಕೂಡ ಎಎಪಿ ಹೇಳಿದೆ. 
ಡಿಸೆಂಬರ್ ೧ ರಿಂದ ಉತ್ತರಪ್ರದೇಶದ ಮೀರತ್, ಲಖನೌ ಮತ್ತು ವಾರಣಾಸಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ನಿರ್ಧಾರದ ವಿರುದ್ಧ ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ ಎಂದು ಕೂಡ ಪಕ್ಷ ತಿಳಿಸಿದೆ. 
"ಇದು ೮ ಲಕ್ಷ ಕೋಟಿ ಹಗರಣ. ಇದು ಕಪ್ಪು ಹಣ ಹಿಂಪಡೆಯುವುದಕ್ಕೆ ಮಾಡಿರುವುದಲ್ಲ ಬದಲಾಗಿ ದೊಡ್ಡ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳಿಗೆ ಸಹಾಯ ಮಾಡಲು ತೆಗೆದುಕೊಂಡಿರುವ ನಿರ್ಧಾರ. ಇದರ ಬಗ್ಗೆ ಕೇಜ್ರಿವಾಲ್ ಈಗಾಗಲೇ ವಿವರವಾಗಿ ತಿಳಿಸಿದ್ದಾರೆ" ಎಂದು ಕೇತನ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT