ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವೆ ಎಂ ವೆಂಕಯ್ಯ ನಾಯ್ಡು 
ಪ್ರಧಾನ ಸುದ್ದಿ

ಪ್ರಧಾನಿ ಗುರಿ ನಗದುರಹಿತ ಆರ್ಥಿಕ ವ್ಯವಸ್ಥೆ: ನಾಯ್ಡು

ಪ್ರಧಾನಿ ನರೇಂದ್ರ ಮೋದಿ ಅವರ ಗುರಿ ನಗದುರಹಿತ ಆರ್ಥಿಕ ವ್ಯವಸ್ಥೆಯನ್ನು ಸೃಷ್ಟಿಸುವುದು ಮತ್ತು ಯಾವುದೇ ಕಾರಣಕ್ಕೂ ೫೦೦ ಮತ್ತು ೧೦೦೦ ರೂ ನೋಟುಗಳನ್ನು ಹಿಂಪಡೆತ ನಿರ್ಧಾರವನ್ನು ವಾಪಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಗುರಿ ನಗದುರಹಿತ ಆರ್ಥಿಕ ವ್ಯವಸ್ಥೆಯನ್ನು ಸೃಷ್ಟಿಸುವುದು ಮತ್ತು ಯಾವುದೇ ಕಾರಣಕ್ಕೂ ೫೦೦ ಮತ್ತು ೧೦೦೦ ರೂ ನೋಟುಗಳನ್ನು ಹಿಂಪಡೆತ ನಿರ್ಧಾರವನ್ನು ವಾಪಸ್ ಪಡೆಯುವುದಿಲ್ಲ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವೆ ಎಂ ವೆಂಕಯ್ಯ ನಾಯ್ಡು ಹೇಳಿದ್ದಾರೆ. 
"ಸರ್ಕಾರ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಬದ್ಧವಾಗಿದೆ. ಕಪ್ಪು ಹಣವನ್ನು ಮುಚ್ಚಿಟ್ಟುವವರ ವಿರುದ್ಧ ಕೂಡ ಈ ಹೋರಾಟ. ಅವರು ತಮ್ಮ ಆಸ್ತಿಪಾಸ್ತಿಯನ್ನು ಘೋಷಿಸಿ ತೆರಿಗೆ ಕಟ್ಟಲು ಮೋದಿ ಅವಕಾಶ ನೀಡಿದ್ದರು, ಆದರೆ ಕೆಲವರು ಮಾಡಲಿಲ್ಲ. ಅವರ ವಿರುದ್ಧ ಈ ಹೋರಾಟ ಮುಂದುವರೆಯುತ್ತದೆ" ಎಂದು ನಾಯ್ಡು ರ್ಯಾಲಿಯಲ್ಲಿ ಹೇಳಿದ್ದಾರೆ. 
"ವಿದೇಶಗಳಿಂದ ಕಪ್ಪು ಹಣ ಹಿಂದಕ್ಕೆ ತರಲು ಮೋದಿ ಮೊದಲು ಪ್ರಯತ್ನಿಸಿದ್ದರು, ಈಗ ದೇಶದಲ್ಲಿರುವ ಕಪ್ಪು ಹಣವನ್ನು ಹೊರಗೆಡವಲು ಪ್ರಯತ್ನಿಸುತ್ತಿದ್ದಾರೆ" ಎಂದು ನಾಯ್ಡು ಹೇಳಿದ್ದಾರೆ. 
"ನೀವು ಯಾವುದೇ ವ್ಯಕ್ತಿಗೆ ನಗದು ಮೂಲಕ ವ್ಯವಹಾರ ನಡೆಸಲು ಬಾರದ, ನಗದು ರಹಿತ ಆರ್ಥಿಕ ವ್ಯವಸ್ಥೆ ಪ್ರಧಾನಿಯವರ ಗುರಿ" ಎಂದು ಕೂಡ ನಾಯ್ಡು ಹೇಳಿದ್ದಾರೆ. 
ಹಾಗೆಯೇ ಜೆ ಎ ಎಂ (ಜನ್ ಧನ್, ಆಧಾರ್ ಮತ್ತು ಮೊಬೈಲ್) ಶೀಘ್ರದಲ್ಲೇ ತರುವುದು ಕೂಡ ಪ್ರಧಾನಿ ಅವರ ಗುರಿ ಎಂದಿರುವ ನಾಯ್ಡು "ವಿಪಕ್ಷಗಳು ಒಗ್ಗೂಡುತ್ತಿರುವ ರೀತಿ ಅಚ್ಚರಿ ತರಿಸಿದೆ. ಆದರೆ ಅವರ ಶಕ್ತಿ ಏನು? ಇಡೀ ದೇಶ ನಮ್ಮ ಜೊತೆಗಿದೆ" ಎಂದು ಕೂಡ ವಿಪಕ್ಷಗಳ ಮೇಲೆ ಹರಿಹಾಯ್ದಿದ್ದಾರೆ. 
"ಈ ನಿರ್ಧಾರವನ್ನು ಹಿಂಪಡೆಯದಂತಹ ರೀತಿಯ ವ್ಯಕ್ತಿ ಮೋದಿ" ಎಂದು ನಾಯ್ಡು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT