ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಭಾರತ್ ಬಂದ್ ಗೆ ನಮ್ಮ ಬೆಂಬಲ ಇಲ್ಲ: ಸಿಎಂ ಸಿದ್ದರಾಮಯ್ಯ

500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಪ್ರತಿಪಕ್ಷಗಳು ನವೆಂಬರ್ 28ರಂದು ಕರೆ...

ಧಾರವಾಡ: 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಪ್ರತಿಪಕ್ಷಗಳು ನವೆಂಬರ್ 28ರಂದು ಕರೆ ನೀಡಿರುವ ಭಾರತ್ ಬಂದ್ ಗೆ ನಮ್ಮ ಬೆಂಬಲ ಇಲ್ಲ ಎಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ನೋಟು ನಿಷೇಧಕ್ಕೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಹಾಗೂ ಎಡಪಕ್ಷ ಸೇರಿದಂತೆ ವಿವಿಧ ಪಕ್ಷಗಳು ನ.28ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಕರೆ ಕೊಟ್ಟಿದ್ದವು. ಏತನ್ಮಧ್ಯೆ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿರುವ ಬಗ್ಗೆ ಬಿಜೆಪಿ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿ, ಸೋಮವಾರದ ಭಾರತ್ ಬಂದ್ ಗೆ ರಾಜ್ಯ ಸರ್ಕಾರ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸುತ್ತಿದೆ ಎಂದು ಆರೋಪಿಸಿತ್ತು.
ಈ ಹಿನ್ನೆಲೆಯಲ್ಲಿ ಇಂದು ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ, 500, 1000 ರುಪಾಯಿ ನೋಟು ನಿಷೇಧಿಸಿದ್ದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಪೂರ್ವ ತಯಾರಿ ಇಲ್ಲದೆ ನಿಷೇಧಿಸಿದ್ದರಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು.
ಇನ್ನು ಸೋಮವಾರ ವಿಧಾನಮಂಡಲದ ಕಲಾಪಕ್ಕೆ ರಜೆ ನೀಡಲು ಸ್ಪೀಕರ್ ನಿರ್ಧಾರ ಕೈಗೊಂಡಿದ್ದಾರೆ ವಿನಃ, ಅದು ಸರ್ಕಾರದ ನಿರ್ಧಾರವಲ್ಲ. ಆದರೆ ಸ್ಪೀಕರ್ ನಿರ್ಧಾರವನ್ನು ಬಿಜೆಪಿ ಮಾತ್ರ ವಿರೋಧಿಸುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT