ನಂದನ್ ನಿಲೇಕಣಿ 
ಪ್ರಧಾನ ಸುದ್ದಿ

ನೋಟು ನಿಷೇಧದಿಂದ ಆರ್ಥಿಕ ಡಿಜಿಟಲೀಕರಣ ವೇಗ ಪಡೆದುಕೊಳ್ಳಲಿದೆ: ನಂದನ್‌ ನಿಲೇಕಣಿ

ಕೇಂದ್ರ ಸರ್ಕಾರ 500 ಹಾಗೂ 1000 ನೋಟ್ ನೀಷೇಧಿಸಿರುವುದರಿಂದ ಆರ್ಥಿಕ ವಹಿವಾಟು ಮತ್ತು ಹಣಕಾಸು ಸೇವೆಗಳಲ್ಲಿನ ಡಿಜಿಟಲೀಕರಣ...

ನವದೆಹಲಿ: ಕೇಂದ್ರ ಸರ್ಕಾರ 500 ಹಾಗೂ 1000 ನೋಟ್ ನೀಷೇಧಿಸಿರುವುದರಿಂದ ಆರ್ಥಿಕ ವಹಿವಾಟು ಮತ್ತು ಹಣಕಾಸು ಸೇವೆಗಳಲ್ಲಿನ ಡಿಜಿಟಲೀಕರಣ ಪ್ರಕ್ರಿಯೆ ವೇಗ ಪಡೆದುಕೊಳ್ಳಲಿದೆ ಎಂದು ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(ಯುಐಎಐ)ದ ಮಾಜಿ ಅಧ್ಯಕ್ಷ ನಂದನ್‌ ನಿಲೇಕಣಿ ಅವರು ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿಲೇಕಣಿ ಅವರು, ದೇಶದಲ್ಲಿ ನೋಟು ನಿಷೇಧದಿಂದ ಆಗಿರುವ ತೊಂದರೆ ಇನ್ನೂ ಕೆಲ ಕಾಲ ಮುಂದುವರಿಯಲಿದೆ. ಆದರೆ, ಮೂರು ವರ್ಷಗಳಲ್ಲಿ ಆಗಬಹುದಿದ್ದ ಡಿಜಟಲೀಕರಣ ಪ್ರಕ್ರಿಯೆಯು ಮುಂದಿನ 3 ತಿಂಗಳಲ್ಲಿ ನಡೆಯಲಿದೆ ಎಂದರು.
ಸ್ಮಾರ್ಟ್‌ಫೋನ್‌ ಹಾಗೂ ಇತರೆ ಮೊಬೈಲ್‌ ಪೋನ್‌ ಉಪಯೋಗಿಸುತ್ತಿರುವ ಲಕ್ಷಾಂತರ ಬಳಕೆದಾರರು ಏಕೀಕೃತ ಪಾವತಿ ಸಂಪರ್ಕ ವ್ಯವಸ್ಥೆ(ಯುಪಿಐ) ಮೂಲಕ ಆನ್‌ಲೈನ್‌ ಪಾವತಿ ಮಾಡಬಹುದು. ಮೊಬೈಲ್‌ ಬಳಕೆ ಮಾಡದವರು ಆಧಾರ್‌ ಕಾರ್ಡ್‌ ಬಳಸಿ ಮೈಕ್ರೋ ಎಟಿಎಂಗಳಲ್ಲಿ ಪಾವತಿ ಮಾಡಬಹುದು.
ಪ್ರಸ್ತುತ 1.3 ಲಕ್ಷ ಮೈಕ್ರೋ ಎಟಿಎಂಗಳು ಬಳಕೆಯಲ್ಲಿದ್ದು, ಸರ್ಕಾರ ಅವುಗಳ ಸಂಖ್ಯೆಯನ್ನು 10 ಲಕ್ಷದವರೆಗೂ ಹೆಚ್ಚಿಸಬಹುದಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT