ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಜಮ್ಮು ದಾಳಿ: ಸ್ಫೋಟಗೊಳ್ಳದ ಬಾಂಬ್ ಗಳು ನಿಷ್ಕ್ರಿಯ

ಜಮ್ಮು ಸೇನಾ ನೆಲೆಯ ಮೇಲೆ ದಾಳಿ ಮಾಡಿ ಹತ್ಯೆಯಾಗಿದ್ದ ಮೂವರು ಭಯೋತ್ಪಾದಕರು ಬಿಟ್ಟು ಹೋಗಿದ್ದ ಸ್ಫೋಟಗೊಳ್ಳದ ಬಾಂಬ್ ಗಳನ್ನು ನಿಷ್ಕ್ರಿಯಗೊಳಿಸಲಾಗಿದ್ದು,

ಜಮ್ಮು: ಜಮ್ಮು ಸೇನಾ ನೆಲೆಯ ಮೇಲೆ ದಾಳಿ ಮಾಡಿ ಹತ್ಯೆಯಾಗಿದ್ದ ಮೂವರು ಭಯೋತ್ಪಾದಕರು ಬಿಟ್ಟು ಹೋಗಿದ್ದ ಸ್ಫೋಟಗೊಳ್ಳದ ಬಾಂಬ್ ಗಳನ್ನು ನಿಷ್ಕ್ರಿಯಗೊಳಿಸಲಾಗಿದ್ದು, ಇನ್ನು ಹೆಚ್ಚು ಸ್ಪೋಟಕಗಳನ್ನು ಅಡಗಿಸಿಟ್ಟಿರುವ ಸಾಧ್ಯತೆ ಇದ್ದು ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನೆ ತಿಳಿಸದೆ. 
"ಬಾಂಬ್ ನಿಷ್ಕ್ರಿಯ ದಳ ಸ್ಫೋಟಗೊಳ್ಳದ ಬಾಂಬ್ ಗಳನ್ನು ನಿಷ್ಕ್ರಿಯಗೊಳಿಸಿದೆ" ಎಂದು ಸೇನಾ ವಕ್ತಾರ ಲೆಫ್ಟಿನೆಂಟ್ ಕಲ್ನಲ್ ಮನೀಶ್ ಮೆಹ್ತಾ ಹೇಳಿದ್ದಾರೆ. 
ಶೋಧ ಕಾರ್ಯಾಚರಣೆ ಮುಗಿಯುತ್ತಾ ಬಂದಿದೆ ಎಂದು ಕೂಡ ಅವರು ತಿಳಿಸಿದ್ದು, ಸೇನಾ ಮತ್ತು ಭಯೋತ್ಪಾದಕರ ನಡುವೆ ೧೪ ಘಂಟೆಗಳ ಗುಂಡಿನ ಕಾಳಗದ ನಂತರ ಈ ಪ್ರದೇಶ ಈಗ ಭಯೋತ್ಪಾದಕರಿಂದ ಮುಕ್ತವಾಗಿದೆ ಎಂದಿದ್ದಾರೆ. 
ಪೊಲೀಸ್ ಸಮವಸ್ತ್ರ ಧರಿಸಿ ನಗರೋಟ ಸೇನಾ ನೆಲೆಗೆ ದಾಳಿಯಿಟ್ಟಿದ್ದ ಆತ್ಮಹತ್ಯಾ ದಳದ ಭಯೋತ್ಪಾದಕರು ಮಂಗಳವಾರ ಬೆಳಗ್ಗೆ ಏಳು ಜನ ಸೈನಿಕರನ್ನು ಕೊಂಡಿದ್ದರು. ಎಲ್ಲ ಮೂವರು ದಾಳಿಕೋರರನ್ನು ಹತ್ಯೆಗೈಯ್ಯಲಾಗಿದೆ. 
ಈ ದಾಳಿಯಲ್ಲಿ ಮೃತಪಟ್ಟ ಸೈನಿಕರಲ್ಲಿ ಮೇಜರ್ ಗೋಸಾವಿ ಕುನಾಲ್ ಮಣ್ಣಾದೀರ್ ಮತ್ತು ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಕೂಡ ಸೇರಿದ್ದಾರೆ. ಹುತಾತ್ಮರಾದ ಇತರ ಸೈನಿಕರು ಹವಾಲ್ದಾರ್ ಸುಖರಾಜ್ ಸಿಂಗ್, ಲಾನ್ಸ್ ನಾಯಕ್ ಕದಂ ಸ್ಯಾಮ್ ಭಾಜಿ ಯೆಶವಂತರಾವ್, ಗ್ರೆನೇಡಿಯರ್ ರಾಘವೇಂದ್ರ ಸಿಂಗ್ ಮತ್ತು ರೈಫಲ್ ಮ್ಯಾನ್ ಅಜಿಮ್ ರೈ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT