ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ಸೇನೆ ಮುಖ್ಯಸ್ಥ ದಲಬೀರ್ ಸಿಂಗ್ ಸುಹಾಗ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಪಿಒಕೆಯಲ್ಲಿ "ಸೀಮಿತ ದಾಳಿ" ವಿಡಿಯೋ ಕೇಂದ್ರಕ್ಕೆ ನೀಡಿದ ಸೇನೆ: ಮಾಧ್ಯಮ ಬಿಡುಗಡೆ ಕುರಿತು ನಿರ್ಧಾರ ಸಾಧ್ಯತೆ

ಸೇನೆ ನಡೆಸಿದ ಸೀಮಿತ ದಾಳಿ ಕುರಿತ ಮಹತ್ವದ ವಿಡಿಯೋ ದಾಖಲೆಗಳನ್ನು ಸೇನಾಧಿಕಾರಿಗಳು ಕೇಂದ್ರ ಸರ್ಕಾರಕ್ಕೆ ನೀಡಿದ್ದು, ಈ ವಿಡಿಯೋ ದಾಖಲೆಯನ್ನು ಮಾಧ್ಯಮಗಳಿಗೆ ನೀಡಬೇಕೇ ಬೇಡವೆ ಎಂಬ ಅಂಶದ ಕುರಿತು ಅಂತಿಮ ನಿರ್ಧಾರ...

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತ ಮಹತ್ವದ ವಿಡಿಯೋ ದಾಖಲೆಗಳನ್ನು ಸೇನಾಧಿಕಾರಿಗಳು ಕೇಂದ್ರ ಸರ್ಕಾರಕ್ಕೆ ನೀಡಿದ್ದು,  ಈ ವಿಡಿಯೋ ದಾಖಲೆಯನ್ನು ಮಾಧ್ಯಮಗಳಿಗೆ ನೀಡಬೇಕೇ ಬೇಡವೆ ಎಂಬ ಅಂಶದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೇ ಅಂತಿಮ ನಿರ್ಧಾರ ಕೈಗೊಳ್ಳಲ್ಲಿದ್ದಾರೆ ಎಂದು  ಹೇಳಲಾಗುತ್ತಿದೆ.

ಮೂಲಗಳ ಪ್ರಕಾರ ಈಗಾಗಲೇ ಸೀಮಿತ ದಾಳಿ ಕುರಿತು ವಿಡಿಯೋ ದಾಖಲೆಗಳು ಕೇಂದ್ರ ಸರ್ಕಾರ ತಲುಪಿದ್ದು, ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟಸಭೆ ನಡೆಸಿ ವಿಡಿಯೋ ದಾಖಲೆಗಳನ್ನು  ಬಿಡುಗಡೆ ಮಾಡಬೇಕೇ ಅಥವಾ ಇಲ್ಲವೇ ಎಂಬ ಅಂಶದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಚರ್ಚೆ ನಡೆಸಲಿದ್ದಾರೆ. ಬಳಿಕ ತಮ್ಮ ನಿರ್ಧಾವನ್ನು ಪ್ರಕಟಿಸಲಿದ್ದಾರೆ ಎಂದು  ಹೇಳಲಾಗುತ್ತಿದೆ.

ಸೀಮಿತ ದಾಳಿ ನಡೆಸಿದ್ದು ನಿಜ

ಇನ್ನು ಪಾಕಿಸ್ತಾನ ಮೂಲದ ಉಗ್ರರ ವಿರುದ್ಧ ಭಾರತೀಯ ಸೇನೆ ಸೆಪ್ಟೆಂಬರ್ 28 ಬುಧವಾರ ರಾತ್ರಿ ನಡೆಸಿದ್ದ ಸೀಮಿತ ದಾಳಿ ಕುರಿತಂತೆ ಪಾಕಿಸ್ತಾನ ಸರ್ಕಾರ ಸೇರಿದಂತೆ ಆಮ್ ಆದ್ಮಿ ಪಕ್ಷಗಳು  ಶಂಕೆ ವ್ಯಕ್ತಪಡಿಸಿದ್ದು, ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುವಂತೆ ಆಗ್ರಹಿಸುತ್ತಿವೆ. ಈ ನಡುವೆ ಪ್ರತಿಪಕ್ಷ ಕಾಂಗ್ರೆಸ್ ಸೀಮಿತ ದಾಳಿ ನಡೆದಿದೆ ಎಂದು ಒಪ್ಪಿಕೊಳ್ಳುತ್ತಿದೆಯಾದರೂ  ಸಾಕ್ಷ್ಯಾಧಾರಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ಸೇನೆ ಸೀಮಿತ ದಾಳಿ ನಡೆದಿರುವುದು ನಿಜ  ಎಂದು ಹೇಳಿದೆ.

ಸೆಪ್ಟೆಂಬರ್ 28 ರ ಬುಧವಾರ ರಾತ್ರಿ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನಮ್ಮ ವಿಶೇಷ ಪಡೆಗಳು ನುಗ್ಗಿ ಅಲ್ಲಿದ್ದ ಸುಮಾರು 7 ಉಗ್ರ ನೆಲೆಗಳನ್ನು ಧ್ವಂಸಗೊಳಿಸಿವೆ. ಈ ವೇಳೆ 50 ಉಗ್ರರನ್ನು ಹಾಗೂ  ಅವರನ್ನು ರಕ್ಷಿಸಲು ಬಂದ ಪಾಕಿಸ್ತಾನದ 6 ಮಂದಿ ಸೈನಿಕರನ್ನು ಕೊಲ್ಲಲಾಗಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT