ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಬಿಡಿ ಸಿಗರೇಟ್ ಗಳ ಮಾರಾಟಕ್ಕೆ ಹಿಮಾಚಲದಲ್ಲಿ ನಿಷೇಧ; ಇಂದಿನಿಂದ ಜಾರಿ

ಯುವ ಜನತೆಯನ್ನು ಧೂಮಪಾನ ಮತ್ತು ತಂಬಾಕಿನಿಂದ ದೂರ ಉಳಿಯುವಂತೆ ಉತ್ತೇಜಿಸುವ ಕ್ರಮದಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಡಿ ಸಿಗರೇಟ್ ಮತ್ತು ಬೀಡಿಗಳನ್ನು ಮಾರಾಟ ಮಾಡುವುದನ್ನು ಇಂದಿನಿಂದ

ಶಿಮ್ಲಾ: ಯುವ ಜನತೆಯನ್ನು ಧೂಮಪಾನ ಮತ್ತು ತಂಬಾಕಿನಿಂದ ದೂರ ಉಳಿಯುವಂತೆ ಉತ್ತೇಜಿಸುವ ಕ್ರಮದಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಡಿ ಸಿಗರೇಟ್ ಮತ್ತು ಬೀಡಿಗಳನ್ನು ಮಾರಾಟ ಮಾಡುವುದನ್ನು ಇಂದಿನಿಂದ ನಿಷೇಧಿಸಲಾಗಿದೆ. ಈ ಕಾಯ್ದೆ ಕಳೆದ ಮುಂಗಾರು ಅಧಿವೇಶನದಲ್ಲಿ ಮಂಜೂರಾಗಿತ್ತು ಮತ್ತು ರಾಜ್ಯಪಾಲರಿಂದ ಒಪ್ಪಿಗೆಯೂ ಸಿಕ್ಕಿತ್ತು. 
ಈ ಕಾಯ್ದೆಯ ಪ್ರಕಾರ ಬಿಡಿ ಸಿಗರೇಟ್ ಮತ್ತು ಬೀಡಿಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರು ಕಡ್ಡಾಯವಾಗಿ ನೊಂದಣಿ ಮಾಡಿಸಿಕೊಳ್ಳಬೇಕಿದೆ. ಇದನ್ನು ಉಲ್ಲಂಘಿಸಿದವರಿಗೆ ಮೊದಲ ಬಾರಿಗೆ 50 ಸಾವಿರು ದಂಡ ಮತ್ತು ಮೂರು ತಿಂಗಳ ಜೈಲು ಶಿಕ್ಷೆ, ನಂತರದ ಉಲ್ಲಂಘನೆಗಳಿಗೆ 1 ಲಕ್ಷ ರು ದಂಡ ಮತ್ತು ಒಂದು ವರ್ಷದವರೆಗೆ ಜೈಲು ಸಜೆ ನೀಡಲಾಗುತ್ತದೆ. 
ನೊಂದಣಿಯಿಲ್ಲದೆ ತಂಬಾಕು ಉತ್ಪನ್ನ ಮಾರಾಟ ಮಾಡುವವರಿಗೆ ಮೊದಲ ಬಾರಿಗೆ 10 ಸಾವಿರ ರೂ ದಂಡ ಮತ್ತು ನಂತರ ಉಲ್ಲಂಘನೆಗಳಿಗೆ 15 ಸಾವಿರ ರೂ ದಂಡ ವಿಧಿಸಲಾಗುತ್ತದೆ. 
ಈ ಕಾಯ್ದೆಯಡಿ ಉಪ ಸಬ್ ಇನ್ಸ್ಪೆಕ್ಟರ್ ಮೇಲ್ಪಟ್ಟ ಯಾವುದೇ ಪೊಲೀಸ್ ಅಧಿಕಾರಿ ಅಥವಾ ರಾಜ್ಯ ಸರ್ಕಾರ ಪರವಾನಗಿ ನೀಡಿರುವ ಅಧಿಕಾರಿಗಳು ಉಲ್ಲಂಘನೆಯ ಸಂಶಯ ಬಂದಲ್ಲಿ ದಾಳಿ ಮಾಡುವ ಅಧಿಕಾರ ಹೊಂದಿರುತ್ತಾರೆ. 
ತಂಬಾಕು ಉತ್ಪನ್ನಗಳ ಸೇವನೆಯನ್ನು ತಗ್ಗಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಕೌಲ್ ಸಿಂಗ್ ಠಾಕುರ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!

ನಿಂಬೆಹಣ್ಣು ಕತ್ತರಿಸಿ, ಮಳೆ ನಿಲ್ಲಿಸಿದೆ: ವಿವಾದವನ್ನು ಮೈ ಮೇಲೆ ಎಳೆದುಕೊಂಡ ಬಿಜೆಪಿ ಸಂಸದ! ಕಾಂಗ್ರೆಸ್, ನೆಟ್ಟಿಗರ ಲೇವಡಿ