ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಬಿಡಿ ಸಿಗರೇಟ್ ಗಳ ಮಾರಾಟಕ್ಕೆ ಹಿಮಾಚಲದಲ್ಲಿ ನಿಷೇಧ; ಇಂದಿನಿಂದ ಜಾರಿ

ಯುವ ಜನತೆಯನ್ನು ಧೂಮಪಾನ ಮತ್ತು ತಂಬಾಕಿನಿಂದ ದೂರ ಉಳಿಯುವಂತೆ ಉತ್ತೇಜಿಸುವ ಕ್ರಮದಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಡಿ ಸಿಗರೇಟ್ ಮತ್ತು ಬೀಡಿಗಳನ್ನು ಮಾರಾಟ ಮಾಡುವುದನ್ನು ಇಂದಿನಿಂದ

ಶಿಮ್ಲಾ: ಯುವ ಜನತೆಯನ್ನು ಧೂಮಪಾನ ಮತ್ತು ತಂಬಾಕಿನಿಂದ ದೂರ ಉಳಿಯುವಂತೆ ಉತ್ತೇಜಿಸುವ ಕ್ರಮದಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಡಿ ಸಿಗರೇಟ್ ಮತ್ತು ಬೀಡಿಗಳನ್ನು ಮಾರಾಟ ಮಾಡುವುದನ್ನು ಇಂದಿನಿಂದ ನಿಷೇಧಿಸಲಾಗಿದೆ. ಈ ಕಾಯ್ದೆ ಕಳೆದ ಮುಂಗಾರು ಅಧಿವೇಶನದಲ್ಲಿ ಮಂಜೂರಾಗಿತ್ತು ಮತ್ತು ರಾಜ್ಯಪಾಲರಿಂದ ಒಪ್ಪಿಗೆಯೂ ಸಿಕ್ಕಿತ್ತು. 
ಈ ಕಾಯ್ದೆಯ ಪ್ರಕಾರ ಬಿಡಿ ಸಿಗರೇಟ್ ಮತ್ತು ಬೀಡಿಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರು ಕಡ್ಡಾಯವಾಗಿ ನೊಂದಣಿ ಮಾಡಿಸಿಕೊಳ್ಳಬೇಕಿದೆ. ಇದನ್ನು ಉಲ್ಲಂಘಿಸಿದವರಿಗೆ ಮೊದಲ ಬಾರಿಗೆ 50 ಸಾವಿರು ದಂಡ ಮತ್ತು ಮೂರು ತಿಂಗಳ ಜೈಲು ಶಿಕ್ಷೆ, ನಂತರದ ಉಲ್ಲಂಘನೆಗಳಿಗೆ 1 ಲಕ್ಷ ರು ದಂಡ ಮತ್ತು ಒಂದು ವರ್ಷದವರೆಗೆ ಜೈಲು ಸಜೆ ನೀಡಲಾಗುತ್ತದೆ. 
ನೊಂದಣಿಯಿಲ್ಲದೆ ತಂಬಾಕು ಉತ್ಪನ್ನ ಮಾರಾಟ ಮಾಡುವವರಿಗೆ ಮೊದಲ ಬಾರಿಗೆ 10 ಸಾವಿರ ರೂ ದಂಡ ಮತ್ತು ನಂತರ ಉಲ್ಲಂಘನೆಗಳಿಗೆ 15 ಸಾವಿರ ರೂ ದಂಡ ವಿಧಿಸಲಾಗುತ್ತದೆ. 
ಈ ಕಾಯ್ದೆಯಡಿ ಉಪ ಸಬ್ ಇನ್ಸ್ಪೆಕ್ಟರ್ ಮೇಲ್ಪಟ್ಟ ಯಾವುದೇ ಪೊಲೀಸ್ ಅಧಿಕಾರಿ ಅಥವಾ ರಾಜ್ಯ ಸರ್ಕಾರ ಪರವಾನಗಿ ನೀಡಿರುವ ಅಧಿಕಾರಿಗಳು ಉಲ್ಲಂಘನೆಯ ಸಂಶಯ ಬಂದಲ್ಲಿ ದಾಳಿ ಮಾಡುವ ಅಧಿಕಾರ ಹೊಂದಿರುತ್ತಾರೆ. 
ತಂಬಾಕು ಉತ್ಪನ್ನಗಳ ಸೇವನೆಯನ್ನು ತಗ್ಗಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಕೌಲ್ ಸಿಂಗ್ ಠಾಕುರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT