ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಬಿಡಿ ಸಿಗರೇಟ್ ಗಳ ಮಾರಾಟಕ್ಕೆ ಹಿಮಾಚಲದಲ್ಲಿ ನಿಷೇಧ; ಇಂದಿನಿಂದ ಜಾರಿ

ಯುವ ಜನತೆಯನ್ನು ಧೂಮಪಾನ ಮತ್ತು ತಂಬಾಕಿನಿಂದ ದೂರ ಉಳಿಯುವಂತೆ ಉತ್ತೇಜಿಸುವ ಕ್ರಮದಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಡಿ ಸಿಗರೇಟ್ ಮತ್ತು ಬೀಡಿಗಳನ್ನು ಮಾರಾಟ ಮಾಡುವುದನ್ನು ಇಂದಿನಿಂದ

ಶಿಮ್ಲಾ: ಯುವ ಜನತೆಯನ್ನು ಧೂಮಪಾನ ಮತ್ತು ತಂಬಾಕಿನಿಂದ ದೂರ ಉಳಿಯುವಂತೆ ಉತ್ತೇಜಿಸುವ ಕ್ರಮದಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಡಿ ಸಿಗರೇಟ್ ಮತ್ತು ಬೀಡಿಗಳನ್ನು ಮಾರಾಟ ಮಾಡುವುದನ್ನು ಇಂದಿನಿಂದ ನಿಷೇಧಿಸಲಾಗಿದೆ. ಈ ಕಾಯ್ದೆ ಕಳೆದ ಮುಂಗಾರು ಅಧಿವೇಶನದಲ್ಲಿ ಮಂಜೂರಾಗಿತ್ತು ಮತ್ತು ರಾಜ್ಯಪಾಲರಿಂದ ಒಪ್ಪಿಗೆಯೂ ಸಿಕ್ಕಿತ್ತು. 
ಈ ಕಾಯ್ದೆಯ ಪ್ರಕಾರ ಬಿಡಿ ಸಿಗರೇಟ್ ಮತ್ತು ಬೀಡಿಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರು ಕಡ್ಡಾಯವಾಗಿ ನೊಂದಣಿ ಮಾಡಿಸಿಕೊಳ್ಳಬೇಕಿದೆ. ಇದನ್ನು ಉಲ್ಲಂಘಿಸಿದವರಿಗೆ ಮೊದಲ ಬಾರಿಗೆ 50 ಸಾವಿರು ದಂಡ ಮತ್ತು ಮೂರು ತಿಂಗಳ ಜೈಲು ಶಿಕ್ಷೆ, ನಂತರದ ಉಲ್ಲಂಘನೆಗಳಿಗೆ 1 ಲಕ್ಷ ರು ದಂಡ ಮತ್ತು ಒಂದು ವರ್ಷದವರೆಗೆ ಜೈಲು ಸಜೆ ನೀಡಲಾಗುತ್ತದೆ. 
ನೊಂದಣಿಯಿಲ್ಲದೆ ತಂಬಾಕು ಉತ್ಪನ್ನ ಮಾರಾಟ ಮಾಡುವವರಿಗೆ ಮೊದಲ ಬಾರಿಗೆ 10 ಸಾವಿರ ರೂ ದಂಡ ಮತ್ತು ನಂತರ ಉಲ್ಲಂಘನೆಗಳಿಗೆ 15 ಸಾವಿರ ರೂ ದಂಡ ವಿಧಿಸಲಾಗುತ್ತದೆ. 
ಈ ಕಾಯ್ದೆಯಡಿ ಉಪ ಸಬ್ ಇನ್ಸ್ಪೆಕ್ಟರ್ ಮೇಲ್ಪಟ್ಟ ಯಾವುದೇ ಪೊಲೀಸ್ ಅಧಿಕಾರಿ ಅಥವಾ ರಾಜ್ಯ ಸರ್ಕಾರ ಪರವಾನಗಿ ನೀಡಿರುವ ಅಧಿಕಾರಿಗಳು ಉಲ್ಲಂಘನೆಯ ಸಂಶಯ ಬಂದಲ್ಲಿ ದಾಳಿ ಮಾಡುವ ಅಧಿಕಾರ ಹೊಂದಿರುತ್ತಾರೆ. 
ತಂಬಾಕು ಉತ್ಪನ್ನಗಳ ಸೇವನೆಯನ್ನು ತಗ್ಗಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಕೌಲ್ ಸಿಂಗ್ ಠಾಕುರ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT