ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ವಿರೋಧ: ಕೇಂದ್ರದ ವಿರುದ್ಧ ಪುದುಚೇರಿ ಸಿಎಂ ವಾಗ್ದಾಳಿ

ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಅವರು ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ವಿರೋಧಿಸಿದ ಕೇಂದ್ರ ...

ಪುದುಚೇರಿ: ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಅವರು ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ವಿರೋಧಿಸಿದ ಕೇಂದ್ರ ಸರ್ಕಾರದ ವಿರುದ್ಧ  ಶನಿವಾರ ವಾಗ್ದಾಳಿ ನಡೆಸಿದ್ದು, ತಮಿಳುನಾಡು ಮತ್ತು ಪುದುಚೇರಿಗೆ ಕಾವೇರಿ ನೀರು ಹರಿಸಬಾರದು ಎಂಬ ಕೇಂದ್ರದ ಉದ್ದೇಶ ಬಹಿರಂಗವಾಗಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣಸ್ವಾಮಿ, ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಕೋರ್ಟ್ ಸೂಚನೆಯನ್ನು ಧಿಕ್ಕರಿಸಿ ಎನ್ ಡಿಎ ಸರ್ಕಾರ ಮಂಡಳಿ ರಚನೆಗೆ ವಿರೋಧಿಸಿದೆ. ಇದರಿಂದ ತಮಿಳುನಾಡು ಮತ್ತು ಪುದುಚೇರಿಗೆ ಹರಿಯುವ ನೀರನ್ನು ತಡೆಯುವ ಕೇಂದ್ರ ಉದ್ದೇಶ ಸ್ಪಷ್ಟವಾಗುತ್ತದೆ ಎಂದಿದ್ದಾರೆ.
ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯಾದರೆ ತಮಿಳುನಾಡು ಮತ್ತು ಪುದುಚೇರಿ ಪ್ರತಿ ವರ್ಷ ಸುಪ್ರೀಂ ಕೋರ್ಟ್ ಅಲೆಯುವುದು ತಪ್ಪುತ್ತದೆ ಮತ್ತು ನಾಲ್ಕು ರಾಜ್ಯಗಳಿಗೂ ಸರಿಯಾದ ರೀತಿಯಲ್ಲಿ ನೀರಿನ ಹಂಚಿಕೆಯಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಸೂಚನೆಯಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಪುಟ ವಿಸ್ತರಣೆ ಸರ್ಕಸ್: ಸಚಿವರ ಪಟ್ಟಿ ಬಹುತೇಕ ಫೈನಲ್; 'ಲಕ್ಷ್ಮಿ'ಗೂ ಜಾಕ್‌ಪಾಟ್ ಸಾಧ್ಯತೆ!

Puri Rath Yatra: ಭಾರಿ ಜನಸಾಗರ; ಕಾಲ್ತುಳಿತ ಓರ್ವ ಸಾವು, ನೂರಾರು ಮಂದಿಗೆ ಗಾಯ!

ಒಂದು ಪಂದ್ಯ, 2 ಅರ್ಧಶತಕ, 3 ಶತಕ, 51 ಸಿಕ್ಸರ್‌ಗಳು; ಟಿ20 ಕ್ರಿಕೆಟ್ ಇತಿಹಾಸದ ದಾಖಲೆಗಳೆಲ್ಲಾ ನುಚ್ಚು ನೂರು!

ಶಕ್ತಿ ಕೇಂದ್ರ ವಿಧಾನಸೌಧಕ್ಕೂ ತಟ್ಟಿದ ಬರಗಾಲದ ಬಿಸಿ: ನೀರು, ವಿದ್ಯುತ್ ಮಿತ ಬಳಕೆಗೆ ಸಿಎಸ್‌ ಆದೇಶ

ಶ್ರೀಕೃಷ್ಣ ದಿನಕ್ಕೆ ಐದು ಬಾರಿ ನಮಾಜ್ ಮಾಡುತ್ತಿದ್ದ: Video ವೈರಲ್, ಮುಸ್ಲಿಂ ಮೌಲ್ವಿಯ ನಾಲಿಗೆ ಕತ್ತರಿಸುವವರಿಗೆ 10 ಲಕ್ಷ ರೂ ಬಹುಮಾನ ಘೋಷಿಸಿದ ಅಯೋಧ್ಯೆ ಸ್ವಾಮೀಜಿ!