ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಬಾಂಗ್ಲಾದೇಶದಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿ

ಬಾಂಗ್ಲಾದೇಶದ ಗಾಜಿಪುರ ನಗರದಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಶಂಕಿತ ಉಗ್ರರನ್ನು ಶನಿವಾರ ಹತ್ಯೆ ಮಾಡಲಾಗಿದೆ.

ಢಾಕಾ: ಬಾಂಗ್ಲಾದೇಶದ ಗಾಜಿಪುರ ನಗರದಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಶಂಕಿತ ಉಗ್ರರನ್ನು ಶನಿವಾರ ಹತ್ಯೆ ಮಾಡಲಾಗಿದೆ. 
ಇಬ್ಬರು ಹತ್ಯೆಯಾಗಿರುವುದನ್ನು ಧೃಢೀಕರಿಸಿರುವ ರ್ಯಾಪಿಡ್ ಆಕ್ಷನ್ ಬೆಟಾಲಿಯನ್ (ಆರ್ ಎ ಬಿ) ವಕ್ತಾರ ಮುಫ್ತಿ ಮಹಮೂದ್ ಖಾನ್, ಅವರ ಗುರುತುಗಳನ್ನು ಬಹಿರಂಗಪಡಿಸಿಲ್ಲ. 
ಗಾಜಿಪುರ ಜಿಲ್ಲೆಯ ಪಶ್ಚಿಮ ಹರಿನಾಲ್ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಭಯೋತ್ಪಾದನಾ ವಿರೋಧಿ ದಾಳಿಯಲ್ಲಿ ಭದ್ರತಾ ಪಡೆ ಮನೆಯೊಂದನ್ನು ಸುತ್ತುವರೆದು ಈ ಕಾರ್ಯಾಚರಣೆ ನಡೆಸಿದೆ. ಎಕೆ-47 ಬಂಧೂಕು, ಬಾಂಬ್ ತಯಾರಿಸುವ ವಸ್ತುಗಳು, ಲ್ಯಾಪ್ ಟಾಪ್ ಮತ್ತು ಬುಲೆಟ್ ಗಳನ್ನು ವಶಪಡಿಸಿಕೊಂಡಿರುವುದಾಗಿ ಹಿರಿಯ ಅಧಿಕಾರಿ ಹೇಳಿದ್ದಾರೆ ಎಂದು ಢಾಕಾ ಟ್ರಿಬ್ಯುನ್ ವರದಿ ಮಾಡಿದೆ. 
ಒಂದು ತಿಂಗಳ ಹಿಂದೆಯಷ್ಟೇ ಕಟ್ಟಿದ್ದ ಈ ಕಟ್ಟಡವನ್ನು ಭಯೋತ್ಪಾದಕರು ಬಾಡಿಗೆಗೆ ಪಡೆದಿದ್ದರು ಎಂದು ಪ್ರಾದೇಶಿಕ ನಿವಾಸಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT