ಜಯಲಲಿತಾ 
ಪ್ರಧಾನ ಸುದ್ದಿ

ಜಯಲಲಿತಾಗೆ ಅನಾರೋಗ್ಯ: ನೂತನ ಸಿಎಂ ನೇಮಕಕ್ಕೆ ಡಿಎಂಕೆ ಆಗ್ರಹ

ಅನಾರೋಗ್ಯದ ಕಾರಣದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ತಮಿಳುನಾಡು ಸಿಎಂ ಜಯಲಲಿತಾ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ನೂತನ...

ಚೆನ್ನೈ: ಅನಾರೋಗ್ಯದ ಕಾರಣದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ತಮಿಳುನಾಡು ಸಿಎಂ ಜಯಲಲಿತಾ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ನೂತನ ಮುಖ್ಯಮಂತ್ರಿ ನೇಮಿಸಬೇಕು ಎಂದು ಪ್ರತಿಪಕ್ಷ ಡಿಎಂಕೆ ಆಗ್ರಹಿಸಿದೆ.

ಈ ಮೊದಲು ಕಲವೇ ದಿನಗಳಲ್ಲಿ ಜಯಲಲಿತಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅಪೋಲೊ ಆಸ್ಪತ್ರೆ ತಿಳಿಸಿತ್ತು, ಆದರೆ ಈಗ ಮತ್ತಷ್ಟು ದಿನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯಬೇಕೆಂದು ಹೇಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಆಡಳಿತ ಯಂತ್ರ ಸುಗಮವಾಗಿ ನಡೆಯಲು ನೂತನ ಮುಖ್ಯಮಂತ್ರಿ ನೇಮಿಸಬೇಕು ಇಲ್ಲವೇ, ಉಸ್ತುವಾರಿ ಸಿಎಂ ನೇಮಸಬೇಕು ಎಂದು ತಮಿಳುನಾಡು ವಿರೋಧ ಪಕ್ಷದ ನಾಯಕ ಎಂ.ಕೆ ಸ್ಟಾಲಿನ್ ಒತ್ತಾಯಿಸಿದ್ದಾರೆ. ಆದರೆ ಈ ಬೇಡಿಕೆಗೆ ಮತ್ತೊಂದು ವಿರೋಧ ಪಕ್ಷವಾದ ಕಾಂಗ್ರೆಸ್ ಬೆಂಬಲ ಸೂಚಿಸಿಲ್ಲ.

ಕಾವೇರಿ ವಿವಾದ ಸೇರಿದಂತೆ ತಮಿಳುನಾಡು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಆಡಳಿತ ಯಂತ್ರ ಚುರುಕಾಗಿ ನಡೆಯಬೇಕೆಂದರೇ ತಕ್ಷಣವೇ ಉಸ್ತುವಾರಿ ಮುಖ್ಯಮಂತ್ರಿಯನ್ನಾದರೂ ನೇಮಿಸಬೇಕು ಎಂದು ಒತ್ತಾಯಿಸಿದ್ದಾರೆ.

ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ತಿರುವನುಕ್ಕರಸರ್ ಸಿಎಂ ಜಯಲಲಿತಾ ಅವರ ಆರೋಗ್ಯದಲ್ಲಿ ಚೇತರಿಕೆ ಕಡು ಬರುತ್ತಿದೆ. ಸರ್ಕಾರದ ಆಡಳಿತ ಯಂತ್ರದ ಮೇಲೆ ನಿಗಾ ಇಡಲು ರಾಜ್ಯಪಾಲರಿದ್ದಾರೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಇದ್ದಾರೆ, ಗೃಹಕಾರ್ಯದರ್ಶಿ, ಸೇರಿದಂತೆ ಹಲವು ಇಲಾಖೆ ಗಳ ಕಾರ್ಯದರ್ಶಿಗಳು ಹಾಗೂ ಹಿರಿಯ ಸಚಿವರಿದ್ದಾರೆ. ಆಡಳಿತ ಯಂತ್ರ ಯಥವತ್ತಾಗಿ ತನ್ನ ಕಾರ್ಯ ನಿರ್ವಹಿಸುತ್ತಿದೆ. ಹೀಗಾಗಿ ನೂತನ ಮುಖ್ಯಮಂತ್ರಿ ನೇಮಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ