ಕಾವೇರಿ ತಜ್ಞರ ತಂಡ ಹಾಗೂ ಸುಪ್ರೀಂ ಕೋರ್ಟ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಗೆ ಇಂದು ತಜ್ಞರ ವರದಿ ಸಲ್ಲಿಕೆ

ತೀವ್ರ ಕುತೂಹಲ ಕೆರಳಿಸಿರುವ ಕಾವೇರಿ ವಿವಾದ ಸಂಬಂಧ ಕಾವೇರಿ ಜಲಾನಯನ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಕೇಂದ್ರದ ತಜ್ಞರ ತಂಡ ಸೋಮವಾರ ಸುಪ್ರೀಂ ಕೋರ್ಟ್ ಗೆ ತನ್ನ ವರದಿಯನ್ನು ಸಲ್ಲಿಸಲಿದೆ.

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಕಾವೇರಿ ವಿವಾದ ಸಂಬಂಧ ಕಾವೇರಿ ಜಲಾನಯನ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಕೇಂದ್ರದ ತಜ್ಞರ ತಂಡ  ಸೋಮವಾರ ಸುಪ್ರೀಂ ಕೋರ್ಟ್ ಗೆ ತನ್ನ ವರದಿಯನ್ನು ಸಲ್ಲಿಸಲಿದೆ.

ಖ್ಯಾತ ಜಲತಜ್ಞ ಜಿಎಸ್ ಝಾ ನೇತೃತ್ವದ ಉನ್ನತಾಧಿಕಾರಗದ ತಜ್ಞರ ಸಮಿತಿ ಇಂದು ತನ್ನ ಅಧ್ಯಯನದ ವರದಿಯನ್ನು ಸಲ್ಲಿಕೆ ಮಾಡುತ್ತಿದ್ದು, ನಾಳೆ ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠದ  ಮುಂದೆ ಇದರ ವಿಚಾರಣೆ ನಡೆಯಲಿದೆ. ಕಾವೇರಿ ಜಲಾನಯನ ಭಾಗದಲ್ಲಿ ವಸ್ತುಸ್ಥಿತಿ ಅಧ್ಯಯನಕ್ಕಾಗಿ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು.  ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ  ಜಿಎಸ್ ಝಾ ನೇತೃತ್ವದಲ್ಲಿ ತಂಡ ರಚಿಸಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಕಳುಹಿಸಿತ್ತು.

12 ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ತಾಂತ್ರಿಕ ಅಧ್ಯಯನ ಸಮಿತಿ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ತಲಾ ಎರಡು ದಿನಗಳ ಕಾಲ ವಾಸ್ತವ ಸ್ಥಿತಿಯನ್ನು ಅಧ್ಯಯನ  ಮಾಡಿತ್ತು. ಕರ್ನಾಟಕದ ಹೇಮಾವತಿ, ಕೆಆರ್ ಎಸ್, ಕಬಿನಿ ಹಾಗೂ ಹಾರಂಗಿ ಜಲಾಶಯಗಳು ಸೇರಿದಂತೆ ಕಾವೇರಿ ನದಿ ಅಚ್ಚುಕಟ್ಟು ಪ್ರದೇಶಗಳ ವಾಸ್ತವ ಸ್ಥಿತಿ ಅಧ್ಯಯನ ಮಾಡಿತ್ತು. ಈ ವೇಳೆ
ರಾಜ್ಯದ ಅಧಿಕಾರಿಗಳು ತಜ್ಞರ ತಂಡಕ್ಕೆ ಕಾವೇರಿ ಜಲಾನಯನ ಪ್ರದೇಶಗಳ ವಾಸ್ತವ ಸ್ಥಿತಿಯನ್ನು ತಜ್ಞರ ಗಮನಕ್ಕೆ ತಂದಿದ್ದರು. ಸಚಿವ ಎಂ.ಬಿ ಪಾಟೀಲ್ ನೇತೃತ್ವದಲ್ಲಿ ಅಧಿಕಾರಿಗಳು ತಂಡಕ್ಕೆ  ಮನವಿ ಸಲ್ಲಿಸಿದ್ದರು. ಈ ವೇಳೆ ಮಳೆಯ ಕೊರತೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ರೈತರ ಬೆಳೆ ನಾಶದಿಂದ ಉಂಟಾಗಿರುವ ವಾಸ್ತವತೆಗಳನ್ನು ತಂಡಕ್ಕೆ ವಿವರಿಸಿದ್ದರು. ನಂತರ ಮಂಡ್ಯದ  ಹಲವು ತಾಲೂಕುಗಳಿಗೆ ಭೇಟಿ ನೀಡಿದ ತಂಡ ಬೆಳೆ ನಾಶವಾಗಿರುವ, ಹೆಮ್ಮನಹಳ್ಳಿ, ತೈಲೂರು, ದೊಡ್ಡರಸಿನಕೆರೆ, ಕೊಪ್ಪ, ಹೊನ್ನೆದೊಡ್ಡಿ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ  ಹಾನಿಯಾಗಿರುವ ಬೆಳೆಗಳ ಬಗ್ಗೆ ವರದಿ ಸಂಗ್ರಹಿಸಿದ್ದರು.

ಅದೇರೀತಿ ತಮಿಳುನಾಡಿನ ಭವಾನಿ ಮತ್ತು ಮೆಟ್ಟೂರು ಜಲಾಶಯಗಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಖುದ್ಧು ಭೇಟಿ ನೀಡಿ ವಸ್ತುಸ್ಥಿತಿಯನ್ನು ತಂಡ ಪರಿಶೀಲನೆ ನಡೆಸಿತ್ತು. ಈ  ವೇಳೆ ತಮಿಳುನಾಡು ಅಧಿಕಾರಿಗಳು ಹಾಗೂ ಈ ಭಾಗದ ರೈತರು ತಜ್ಞರ ತಂಡಕ್ಕೆ ವರದಿ ನೀಡಿದ್ದರು.

ಇಂದು ದೆಹಲಿಗೆ ಮರಳಿರುವ ತಜ್ಞರ ತಂಡ ಸುಪ್ರೀಂ ಕೋರ್ಟ್ ಗೆ ತನ್ನ ವರದಿಯಲ್ಲಿ ಸಲ್ಲಿಕೆ ಮಾಡುತ್ತಿದೆ. ಈ ಸಮಿತಿಯು ಅಧ್ಯಯನ ವರದಿಯನ್ನು ಕೇಂದ್ರ ಜಲಸಂಪನ್ಮೂಲ ಇಲಾಖೆಗೆ  ಸಲ್ಲಿಸಿದೆ. ಈ ವರದಿಯನ್ನು ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟ್​ಗೆ  ಸಲ್ಲಿಸಲಿದೆ. ಈ ವರದಿಯನ್ನಾಧರಿಸಿ ತಜ್ಞರ ತಂಡದ ವರದಿ ಆಧರಿಸಿ ಸುಪ್ರೀಂ ಕೋರ್ಟ್​ನ ದ್ವಿಸದಸ್ಯ ಪೀಠ ಆದೇಶ  ನೀಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT