ಮಹೇಶ್ ಶರ್ಮಾ 
ಪ್ರಧಾನ ಸುದ್ದಿ

ರಾಜಕೀಯ ಉದ್ದೇಶದಿಂದ ಅಯೋಧ್ಯೆಗೆ ಭೇಟಿ ನೀಡಿಲ್ಲ: ಮಹೇಶ್ ಶರ್ಮಾ

ತಮ್ಮ ಅಯೋಧ್ಯೆ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಅಯೋಧ್ಯೆಯಲ್ಲಿ ರಾಮ ದೇಗುಲ ನಿರ್ಮಿಸುವ ವಿಚಾರಕ್ಕೂ ಯಾವುದೇ ಸಂಬಂಧವೂ ಇಲ್ಲ, ಯಾತ್ರಿಕರನ್ನು ...

ನವದೆಹಲಿ: ತಮ್ಮ ಅಯೋಧ್ಯೆ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಅಯೋಧ್ಯೆಯಲ್ಲಿ ರಾಮ ದೇಗುಲ ನಿರ್ಮಿಸುವ ವಿಚಾರಕ್ಕೂ ಯಾವುದೇ ಸಂಬಂಧವೂ ಇಲ್ಲ, ಯಾತ್ರಿಕರನ್ನು ಆಕರ್ಷಿಸುವ ಸಲುವಾಗಿ ಉತ್ತಮ ಪ್ರವಾಸೀ ಸ್ಥಳವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಷ್ಟೇ ತಾವು ಈ ಭೇಟಿ ನೀಡುತ್ತಿರುವುದಾಗಿ ಮಹೇಶ್ ಶರ್ಮಾ ಹೇಳಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅಯೋಧ್ಯೆಗೆ ಭೇಟಿ ನೀಡಿದ ಉದ್ದೇಶವನ್ನು ಮಹೇಶ್ ಶರ್ಮಾ ಸ್ಪಷ್ಟಪಡಿಸಿದರು. ಪ್ರವಾಸೋದ್ಯಮ ಸಚಿವನಾಗಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಾಯಣ ಮ್ಯೂಸಿಯಂ ಸ್ಥಳ ಪರಿಶೀಲನೆಗೆ ಆಗಮಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

1992ರಲ್ಲಿ ಕರಸೇವಕರು 16ನೇ ಶತಮಾನದ ವಿವಾದಾತ್ಮಕ ಬಾಬರಿ ಮಸೀದಿ ಕಟ್ಟಡವನ್ನು ಕೆಡವಿ ಹಾಕಿದ್ದರು. ಈ ಜಾಗದಲ್ಲೇ ರಾಮ ಜನಿಸಿದ್ದರಿಂದ ಇಲ್ಲಿಯೇ ರಾಮಮಂದಿರ ನಿರ್ಮಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಮತ್ತು ಇತರ ಸಂಘಟನೆಗಳು ಪ್ರತಿಪಾದಿಸುತ್ತಾ ಬಂದಿವೆ. ಈ ವಿವಾದ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT