ಸುಪ್ರೀಂ ಕೋರ್ಟ್ 
ಪ್ರಧಾನ ಸುದ್ದಿ

ಮೇಲ್ಮನವಿ ಅರ್ಜಿಯ ತೀರ್ಪು ಕಾಯ್ದಿರಿಸಿದ ಸುಪ್ರೀಂ, ಮುಂದಿನ ಆದೇಶದವರೆಗೆ ನೀರು ಬಿಡುವಂತೆ ಆದೇಶ

ಮುಂದಿನ ಆದೇಶದವರೆಗೆ ತಮಿಳುನಾಡಿಗೆ ನಿತ್ಯ ಎರಡು ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಬುಧವಾರ ಮತ್ತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ...

ನವದೆಹಲಿ: ಮುಂದಿನ ಆದೇಶದವರೆಗೆ ತಮಿಳುನಾಡಿಗೆ ನಿತ್ಯ ಎರಡು ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಬುಧವಾರ ಮತ್ತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಕಾವೇರಿ ನ್ಯಾಯಾಧಿಕರಣದ ಐ ತೀರ್ಪು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು ಸೇರಿದಂತೆ ನಾಲ್ಕು ರಾಜ್ಯಗಳು ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಮೂರ್ತಿ ದೀಪಕ್ ಮಿಶ್ರ, ನ್ಯಾ.ಅಮಿತವ್ ರಾಯ್, ನ್ಯಾ.ಎಎಂ ಖಾನ್ವಿಲ್ಕರ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಮೇಲ್ಮನವಿ ಅರ್ಜಿಗಳ ಸಿಂಧುತ್ವದ ಬಗ್ಗೆ ತೀರ್ಪು ಕಾಯ್ದಿರಿಸಿ, ಮುಂದಿನ ಆದೇಶದವರೆಗೆ ನೀರು ಬಿಡುವಂತೆ ಆದೇಶ ನೀಡಿದೆ.
ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಇಂದು ಕೇಂದ್ರ ಸರ್ಕಾರ, ಕರ್ನಾಟಕ, ಪುದುಚೇರಿ, ತಮಿಳುನಾಡು ಹಾಗೂ ಕೇರಳ ರಾಜ್ಯಗಳ ಪರ ವಕೀಲರ ವಾದ ಮಂಡನೆ ಮುಕ್ತಾಯವಾಗಿದ್ದು, ವಾದ, ಪ್ರತಿವಾದ ಆಲಿಸಿದ ಕೋರ್ಟ್ ತೀರ್ಪನ್ನು ಕಾಯ್ದರಿಸಿದೆ.
ನಿನ್ನೆ ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಅವರು, ಅಂತಾರಾಜ್ಯ ನದಿ ವಿವಾದ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಮೇಲ್ಮನವಿಗಳ ಅರ್ಜಿಗಳು ವಿಚಾರಣೆಗೆ ಅರ್ಹವಲ್ಲ ಎಂದು ಹೇಳಿದ್ದರು.
ಇನ್ನು ಕರ್ನಾಟಕದ ಪರ ವಾದ ಮಂಡಿಸಿದ ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಅವರು, ಕರ್ನಾಟಕದ ಮೇಲ್ಮನವಿ ವಿಚಾರಣೆಗೆ ಯೋಗ್ಯವಾಗಿದೆ ಎಂದಿದ್ದರು. ಅಲ್ಲದೆ ತಮಿಳುನಾಡು ಮತ್ತು ಕೇರಳ ವಕೀಲರು ಸಹ ಮೇಲ್ಮನವಿ ಅರ್ಜಿಗಳು ವಿಚಾರಣೆಗೆ ಯೋಗ್ಯ ಎಂದು ವಾದಿಸಿದವು. ಆದರೆ ಪುದುಚೇರಿ ಮಾತ್ರ ಕೇಂದ್ರ ಸರ್ಕಾರದ ವಾದವನ್ನು ಬೆಂಬಲಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT