ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕಾಣೆಯಾದ ಜೆ ಎನ್ ಯು ವಿದ್ಯಾರ್ಥಿ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ರೂ ಬಹುಮಾನ

ಕಳೆದ ಐದು ದಿನಗಳಿಂದ ಕಾಣೆಯಾಗಿರುವ ಜವಾಹರ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಜೀಬ್ ಅಹಮದ್ ಬಗೆಗೆ ಸುಳಿವು ನೀಡಿದವರಿಗೆ 50 ಸಾವಿರ ರೂ ಬಹುಮಾನ ನೀಡುವುದಾಗಿ ದೆಹಲಿ

ನವದೆಹಲಿ: ಕಳೆದ ಐದು ದಿನಗಳಿಂದ ಕಾಣೆಯಾಗಿರುವ ಜವಾಹರ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಜೀಬ್ ಅಹಮದ್ ಬಗೆಗೆ ಸುಳಿವು ನೀಡಿದವರಿಗೆ 50 ಸಾವಿರ ರೂ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದಾರೆ. 
ಬುಧವಾರ ನೀಡಿರುವ ಆದೇಶದ ಪ್ರಕಾರ, ಕಾಣೆಯಾಗಿರುವ/ಅಪಹರಣವಾಗಿರುವ ಜೆ ಎನ್ ಯು ವಿದ್ಯಾರ್ಥಿ ನಜೀಬ್ ಅಹಮದ್ ಅವರ ಬಗ್ಗೆ ಮಾಹಿತಿ ಅಥವಾ ಸುಳಿವನ್ನು ವಸಂತಕುಂಜ್ ಉತ್ತರ ಪೊಲೀಸ್ ಸ್ಟೇಷನ್ ನ ಸ್ಟೇಷನ್ ಅಧಿಕಾರಿಗೆ ನೀಡುವಂತೆ ಕೋರಿದ್ದಾರೆ. 
ಅಹಮದ್ ಇರುವಿಕೆಯ ಬಗ್ಗೆ ಮಾಹಿತಿ ನೀಡಿದವರಿಗೆ 50 ಸಾವಿರ ರು ಬಹುಮಾನ ನೀಡುವುದಾಗಿ ಕೂಡ ಪೊಲೀಸರು ತಿಳಿಸಿದ್ದಾರೆ. 
ಎಬಿವಿಪಿ ವಿದ್ಯಾರ್ಥಿಗಳ ಜೊತೆಗಿನ ಕಾದಾಟದ ನಂತರ ಅಕ್ಟೋಬರ್ 15 ರಿಂದ ಅಹಮದ್, ಮಹಿ-ಮಾಂಡವಿ ಹಾಸ್ಟೆಲ್ ನಿಂದ ಕಾಣೆಯಾಗಿದ್ದಾರೆ. 
ಐಪಿಸಿ 365ರಡಿ ಪೊಲೀಸರಿಗೆ ರು ನೀಡಲಾಗಿದ್ದು, ವಿಶ್ವವಿದ್ಯಾಲಯ ಕೂಡ ಆಂತರಿಕ ತನಿಖೆಗೆ ಮುಂದಾಗಿದೆ. 
ಬುಧವಾರ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಉಪಕುಲಪತಿ ಮತ್ತು ಹಿರಿಯ ಅಧಿಕಾರಿಗಳು ತಮ್ಮ ಕೋಣೆಯಿಂದ ಹೊರಬರದಂತೆ ಈ ವಿದ್ಯಾರ್ಥಿಗಳು ದಿಗ್ಬಂಧನ ಮಾಡಿದ್ದಾರೆ. ಈ ಪ್ರತಿಭಟನೆಯಲ್ಲಿ ಎಬಿವಿಪಿ ಸದಸ್ಯರು ಕೂಡ ಪಾಲ್ಗೊಂಡಿದ್ದು ವಿಶ್ವವಿದ್ಯಾಲಯದ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT