ನವದೆಹಲಿ: ಕಳೆದ ಐದು ದಿನಗಳಿಂದ ಕಾಣೆಯಾಗಿರುವ ಜವಾಹರ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಜೀಬ್ ಅಹಮದ್ ಬಗೆಗೆ ಸುಳಿವು ನೀಡಿದವರಿಗೆ 50 ಸಾವಿರ ರೂ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದಾರೆ.
ಬುಧವಾರ ನೀಡಿರುವ ಆದೇಶದ ಪ್ರಕಾರ, ಕಾಣೆಯಾಗಿರುವ/ಅಪಹರಣವಾಗಿರುವ ಜೆ ಎನ್ ಯು ವಿದ್ಯಾರ್ಥಿ ನಜೀಬ್ ಅಹಮದ್ ಅವರ ಬಗ್ಗೆ ಮಾಹಿತಿ ಅಥವಾ ಸುಳಿವನ್ನು ವಸಂತಕುಂಜ್ ಉತ್ತರ ಪೊಲೀಸ್ ಸ್ಟೇಷನ್ ನ ಸ್ಟೇಷನ್ ಅಧಿಕಾರಿಗೆ ನೀಡುವಂತೆ ಕೋರಿದ್ದಾರೆ.
ಅಹಮದ್ ಇರುವಿಕೆಯ ಬಗ್ಗೆ ಮಾಹಿತಿ ನೀಡಿದವರಿಗೆ 50 ಸಾವಿರ ರು ಬಹುಮಾನ ನೀಡುವುದಾಗಿ ಕೂಡ ಪೊಲೀಸರು ತಿಳಿಸಿದ್ದಾರೆ.
ಎಬಿವಿಪಿ ವಿದ್ಯಾರ್ಥಿಗಳ ಜೊತೆಗಿನ ಕಾದಾಟದ ನಂತರ ಅಕ್ಟೋಬರ್ 15 ರಿಂದ ಅಹಮದ್, ಮಹಿ-ಮಾಂಡವಿ ಹಾಸ್ಟೆಲ್ ನಿಂದ ಕಾಣೆಯಾಗಿದ್ದಾರೆ.
ಐಪಿಸಿ 365ರಡಿ ಪೊಲೀಸರಿಗೆ ರು ನೀಡಲಾಗಿದ್ದು, ವಿಶ್ವವಿದ್ಯಾಲಯ ಕೂಡ ಆಂತರಿಕ ತನಿಖೆಗೆ ಮುಂದಾಗಿದೆ.
ಬುಧವಾರ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಉಪಕುಲಪತಿ ಮತ್ತು ಹಿರಿಯ ಅಧಿಕಾರಿಗಳು ತಮ್ಮ ಕೋಣೆಯಿಂದ ಹೊರಬರದಂತೆ ಈ ವಿದ್ಯಾರ್ಥಿಗಳು ದಿಗ್ಬಂಧನ ಮಾಡಿದ್ದಾರೆ. ಈ ಪ್ರತಿಭಟನೆಯಲ್ಲಿ ಎಬಿವಿಪಿ ಸದಸ್ಯರು ಕೂಡ ಪಾಲ್ಗೊಂಡಿದ್ದು ವಿಶ್ವವಿದ್ಯಾಲಯದ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos