ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಸರ್ದಾರ್ಪುರ ಗಲಭೆ ಪ್ರಕರಣ; 17 ಜನಕ್ಕೆ ಜೀವಾವಧಿ; 14 ಜನ ಖುಲಾಸೆ

33 ಜನರನ್ನು ಸಜೀವವಾಗಿ ಸುಟ್ಟುಹಾಕಲಾಗಿದ್ದ 2002 ಗೋಧ್ರಾ ನಂತರದ ಸರ್ದಾರ್ಪುರ ಗಲಭೆ ಪ್ರಕರಣದಲ್ಲಿ ಕೆಳಗಿನ ನ್ಯಾಯಾಲಯ ಶಿಕ್ಷೆ ನೀಡಿದ್ದ 31 ಜನರಲ್ಲಿ 14 ಜನರನ್ನು ಖುಲಾಸೆ ಮಾಡಿರುವ

ಅಹಮದಾಬಾದ್: 33 ಜನರನ್ನು ಸಜೀವವಾಗಿ ಸುಟ್ಟುಹಾಕಲಾಗಿದ್ದ 2002 ಗೋಧ್ರಾ ನಂತರದ ಸರ್ದಾರ್ಪುರ ಗಲಭೆ ಪ್ರಕರಣದಲ್ಲಿ ಕೆಳಗಿನ ನ್ಯಾಯಾಲಯ ಶಿಕ್ಷೆ ನೀಡಿದ್ದ 31 ಜನರಲ್ಲಿ 14 ಜನರನ್ನು ಖುಲಾಸೆ ಮಾಡಿರುವ ಗುಜರಾತ್ ಹೈಕೋರ್ಟ್, 17 ಜನಕ್ಕೆ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿದಿದೆ. 
ನ್ಯಾಯಾಧೀಶರುಗಳಾದ ಹರ್ಷ ದೇವಣಿ ಮತ್ತು ಬಿರೇನ್ ವೈಷ್ಣವ್ ಅವರುಗಳನ್ನು ಒಳಗೊಂಡ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ತಪ್ಪಿತಸ್ಥರೆಂದು ತೀರ್ಪು ನೀಡಲಾಗಿದ್ದ ಇನ್ನುಳಿದ 14 ಮಂದಿಗೆ, ಸಾಕ್ಷ್ಯಾಧಾರಗಳ ಕೊರತೆ ಮತ್ತು ಪ್ರತ್ಯಕ್ಷದರ್ಶಿಗಳ ದ್ವಂದ್ವ ಹೇಳಿಕೆಗಳಿಂದಾಗಿ ಖುಲಾಸೆ ಮಾಡಲಾಗಿದೆ. 
ಸರ್ದಾರ್ಪುರ ಪ್ರಕರಣದಲ್ಲಿ 76 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು, ಅವರಲ್ಲಿ ಇಬ್ಬರು ವಿಚಾರಣೆ ನಡೆಯುವಾಗ ಮೃತರಾಗಿದ್ದರು ಮತ್ತು ಒಬ್ಬ ಬಾಲಾಪರಾಧಿಯಾಗಿದ್ದ. ಜೂನ್ 2009 ರಲ್ಲಿ ಉಳಿದ 73 ಜನರ ವಿರುದ್ಧ ಆರೋಪ ಹೊರಿಸಿ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿತ್ತು. 
ಕೆಳಗಿನ ನ್ಯಾಯಾಲಯ 42 ಜನರನ್ನು ಆರೋಪಮುಕ್ತರನ್ನಾಗಿಸಿ 31 ಜನರಿಗೆ ಶಿಕ್ಷೆ ನೀಡಿತ್ತು. ವಿಶೇಷ ತನಿಖಾ ದಳ ಈ 42 ಜನರಲ್ಲಿ 31 ಜನರನ್ನು ಆರೋಪಮುಕ್ತಗೊಳಿಸದ್ದಕ್ಕೆ ಹೈಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಆದರೆ ಹೈಕೋರ್ಟ್ ಮೆಹಸಾನಾ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು. 
ನವೆಂಬರ್ 9 2011 ರಂದು ವಿಶೇಷ ತನಿಖಾ ದಳದ ನ್ಯಾಯಾಲಯದ ನ್ಯಾಯಾಧೀಶ ಎಸ್ ಸಿ ಶ್ರೀವಾಸ್ತವ 31 ಜನಕ್ಕೆ 50 ಸಾವಿರ ದಂಡ ಮತ್ತು ಜೀವಾವಧಿ ಶಿಕ್ಷೆ ನೀಡಿದ್ದರು. 
ಗೋಧ್ರಾ ನಂತರ ನಡೆದ ಸುಪ್ರೀಂ ಕೋರ್ಟ್ ನೇಮಿಸಿದ್ದ ವಿಶೇಷ ತನಿಖಾ ದಳ ತನಿಖೆ ನಡೆಸಿದ 9 ಪ್ರಕರಣಗಳಲ್ಲಿ ಇದು ಒಂದು. 
ಅಲ್ಪಸಂಖ್ಯಾತರು ವಾಸವಿದ್ಧ ಸರ್ದಾರ್ಪುರ ಗ್ರಾಮದ 'ಶೇಕ್ ವಾಸ್' ಬೀದಿಯನ್ನು ಫೆಬ್ರವರಿ 28 ಮತ್ತು ಮಾರ್ಚ್ 1 2002 ರ ನಡುವೆ ಗುಂಪೊಂದು ಸುತ್ತುವರೆದಿತ್ತು. ಅಲ್ಪಸಂಖ್ಯಾತ ಸಮುದಾಯದವರು ಇಬ್ರಾಹಿಂ ಶೇಕ್ ಎಂಬುವವರ ಮನೆಯಲ್ಲಿ ಹೆದರಿ ಜಮಾಗೊಂಡಿದ್ದರು. ಆದರೆ ಗುಂಪು ಆ ಮನೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರ ಪರಿಣಾಮ 22 ಮಹಿಳೆಯರು ಸೇರಿದಂತೆ 33 ಜನ ಸುಟ್ಟು ಕರುಕಲಾಗಿದ್ದರು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT