ಕಾಶ್ಮೀರ ಪ್ರತ್ಯೇಕವಾದಿ ನಾಯಕ ಸಯ್ಯದ್ ಅಲಿ ಷಾ ಗಿಲಾನಿ 
ಪ್ರಧಾನ ಸುದ್ದಿ

ಬಿಜೆಪಿ ಪಕ್ಷದ ಯಶವಂತ್ ಸಿನ್ಹ ನಿಯೋಗ ಭೇಟಿ ಮಾಡಿದ ಪ್ರತ್ಯೇಕವಾದಿ ಮುಖಂಡ ಗಿಲಾನಿ

ಹಿರಿಯ ಬಿಜೆಪಿ ನಾಯಕ ಯಶವಂತ್ ಸಿನ್ಹ ಮುಂದಾಳತ್ವದ ಐದು ಸದಸ್ಯರ ನಿಯೋಗವನ್ನು ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಸಯ್ಯದ್ ಅಲಿ ಷಾ ಗಿಲಾನಿ ತಮ್ಮ ಗೃಹದಲ್ಲಿ ಮಂಗಳವಾರ ಭೇಟಿ ಮಾಡಿದ್ದಾರೆ.

ಶ್ರೀನಗರ: ಹಿರಿಯ ಬಿಜೆಪಿ ನಾಯಕ ಯಶವಂತ್ ಸಿನ್ಹ ಮುಂದಾಳತ್ವದ ಐದು ಸದಸ್ಯರ ನಿಯೋಗವನ್ನು ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಸಯ್ಯದ್ ಅಲಿ ಷಾ ಗಿಲಾನಿ ತಮ್ಮ ಗೃಹದಲ್ಲಿ ಮಂಗಳವಾರ ಭೇಟಿ ಮಾಡಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಮೂರೂ ತಿಂಗಳಿನಿಂದ ನೆಲೆಸಿರುವ ಗಲಭೆಯ ಪರಿಹಾರದ ಚರ್ಚೆಗಾಗಿ ಈ ಸಭೆ ಏರ್ಪಡಿಸಲಾಗಿದೆ. 
ಜಮ್ಮು ಮತ್ತು ಕಾಶ್ಮೀರದಲ್ಲಿ ಸೇವೆ ಸಲ್ಲಿಸಿರುವ ಮಾಜಿ ಆಡಳಿತಾಧಿಕಾರಿ ವಜಾಹತ್ ಹಬೀಬುಲ್ಲಾ, ಮಾಜಿ ಏರ್ ವೈಸ್ ಮಾರ್ಷಲ್ ಕಪಿಲ್ ಕಾಕ್, ಪತ್ರಕರ್ತ ಭರತ್ ಭೂಷಣ್  ಮತ್ತು ಸಾಮಾಜಿಕ ಕಾರ್ಯಕರ್ತ ಸುಶೋಭಾ ಬಾರ್ವೆ ಈ ನಿಯೋಗದ ಇತರ ಸದಸ್ಯರಾಗಿದ್ದು, ಗಿಲಾನಿ ಅವರ ಮನೆಗೆ ತೆರಳಿದ್ದಾರೆ. 
ಗಿಲಾನಿ ಅವರನ್ನು ಮೂರೂ ತಿಂಗಳಿನಿಂದ ಗೃಹ ಬಂಧನದಲ್ಲಿ ಇರಿಸಲಾಗಿದ್ದು, ಸಿನ್ಹ ನೇತೃತ್ವದ ನಿಯೋಗವನ್ನು ಭೇಟಿ ಮಾಡಲು ಒಪ್ಪಿಕೊಂಡಿರುವುದು ವಿಶೇಷ. ಏಕೆಂದರೆ ಸೆಪ್ಟೆಂಬರ್ 4 ರಂದು ಎಡ ಪಕ್ಷಗಳ ಮುಖಂಡ ಸೀತಾರಾಮ್ ಯೆಚೂರಿ ಮತ್ತು ಕೆಲವು ಬಿಜೆಪಿ ಸದಸ್ಯರು ಇದ್ದ ಸರ್ವಪಕ್ಷಗಳ ನಿಯೋಗವನ್ನು ಭೇಟಿ ಮಾಡಲು ಗಿಲಾನಿ ನಿರಾಕರಿಸಿದ್ದರು. 
ಮತ್ತೊಬ್ಬ ಹುರಿಯತ್ ನಾಯಕ ಮೀರ್ವೈಜ್ ಉಮರ್ ಪಾರುಕ್, ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ ನಾಯಕ ಯಾಸಿನ್ ಮಲಿಕ್ ಅವರನ್ನು ಕೂಡ ಸಿನ್ಹ ಭೇಟಿ ಮಾಡುವ ಸಾಧ್ಯತೆ ಇದೆ. 
"ನಾವು ಇಲ್ಲಿ ಮನುಷ್ಯತ್ವಕ್ಕಾಗಿ ಬಂದಿದ್ದೇವೆ. ನಾವು ಅವರ (ಕಾಶ್ಮೀರಿ ಜನರ) ನೋವು ಮತ್ತು ಕಷ್ಟಗಳನ್ನು ಆಲಿಸಲಿದ್ದೇವೆ. ರಾಜ್ಯದ ಗಲಭೆಗಳಿಗೆ ಪರಿಹಾರ ಸಿಗಲಿದೆ ಎಂದು ನಂಬಿದ್ದೇನೆ" ಎಂದು ಸಿನ್ಹ ಹೇಳಿದ್ದಾರೆ. 
ಜುಲೈ 8 ರಂದು ಭದ್ರತಾ ಪಡೆಗಳು ಹಿಜಬುಲ್ ಮುಜಾಹಿದ್ದೀನ್ ಮುಖಂಡ ಬುರ್ಹಾನ್ ವಾನಿಯನ್ನು ಹತ್ಯೆ ಮಾಡಿದಾಗಲಿಂದಲೂ, ಕಾಶ್ಮೀರ ಕುದಿಯುತ್ತಿದ್ದು, ಭದ್ರತಾ ಪಡೆಗಳ ಘರ್ಷಣೆಯೊಂದಿಗೆ ಇಲ್ಲಿಯವರೆಗೂ 92 ಜನ ಮೃತಪಟ್ಟಿದ್ದಾರೆ. 12 ಸಾವಿರಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಪೊಲೀಸರು ಇಲ್ಲಿಯವರೆಗೆ 7000 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT