ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಮತ್ತೆ ಪಾಕ್ ಸೈನಿಕರ ಉಪಟಳ: ಗಡಿಯಲ್ಲಿ ಗುಂಡಿನ ಚಕಮಕಿ, 11ಮಂದಿಗೆ ಗಾಯ

ಆರ್ ಎಸ್ ಪುರ ಸೆಕ್ಟರ್ ನಲ್ಲಿ ಗುಂಡಿನ ಚಕಮಕಿ ಬುಧವಾರವೂ ಮುಂದುವರೆದಿದ್ದು. ಘಟನೆಯಲ್ಲಿ ಈ ವರೆಗೂ ಸುಮಾರು 11 ಮಂದಿ ನಾಗರೀಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿರುವ ಆರ್ ಎಸ್ ಪುರ ಸೆಕ್ಟರ್ ನಲ್ಲಿ ಕಳೆದ 20 ಗಂಟೆಗಳಿಂದ ನಡೆದಿರುವ ಗುಂಡಿನ ಚಕಮಕಿ ಬುಧವಾರವೂ ಮುಂದುವರೆದಿದ್ದು. ಘಟನೆಯಲ್ಲಿ ಈ ವರೆಗೂ  ಸುಮಾರು 11 ಮಂದಿ ನಾಗರೀಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನೆ ನಡೆಸುತ್ತಿರುವ ಗುಂಡಿನ ದಾಳಿ ಬುಧವಾರವೂ ಮುಂದುವರೆದಿದ್ದು, ಪಾಕ್ ಸೈನಿಕರ ಪುಂಡಾಟಕ್ಕೆ ಈ ವರೆಗೂ 11 ಮಂದಿ  ನಾಗರೀಕರು ಗಾಯಗೊಂಡಿದ್ದಾರೆ. ಗಾಯಾಳು ನಾಗರೀಕರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಪಾಕ್ ಸೈನಿಕರಿಗೆ ಭಾರತೀಯ ಯೋಧರು ತಕ್ಕ ಪ್ರತ್ಯುತ್ತರ ನೀಡುತ್ತಿದ್ದು,  ಪಾಕ್ ಪೋಸ್ಟ್ ಗಳತ್ತ ನಿರಂತರ ಗುಂಡಿನ ದಾಳಿ ನಡೆಸುತ್ತಿದ್ದಾರೆ.

ಪಾಕ್ ಸೈನಿಕರ ದಾಳಿಯಿಂದಾಗಿ ಪ್ರಮುಖವಾಗಿ ನೌಶೇರಾ ಮತ್ತು ಆರ್.ಎಸ್. ಪುರಗಳಲ್ಲಿನ ಸಾಕಷ್ಟು ಮನೆಗಳಿಗೆ ಭಾರಿ ಪ್ರಮಾಣದ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT