ವ್ಯಾಟಿಕನ್ ಸಿಟಿ: ತಮ್ಮ ಜೀವಿತಾವಧಿಯನ್ನು ಜನರ ಸೇವೆಗಾಗಿಯೇ ಮುಡಿಪಾಗಿಟ್ಟು, ನೊಂದವರು ಹಾಗೂ ದೀನ ದಲಿತರ ತಾಯಿ ಎಂದೇ ಖ್ಯಾತಿ ಗಳಿಸಿದ್ದ ನೊಬೆಲ್ ಪುರಸ್ಕೃತೆ ಮದರ್ ತೆರೇಸಾ ಅವರಿಗೆ ಭಾನುವಾರ ಸಂತ ಪದವಿ ಪ್ರದಾನ ಮಾಡಲಾಯಿತು.
ಕ್ರಿಶ್ಚಿಯನ್ನರ ಕಾಶಿ ವ್ಯಾಟಿಕನ್ ಸಿಟಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ 133 ದೇಶಗಳಲ್ಲಿ ಮಿಷನರೀಸ್ ಆಫ್ ಚಾರಿಟಿಯ ಸಂಸ್ಥಾಪಕಿ ಮದರ್ ತೆರೆಸಾ ಅವರಿಗೆ ರೋಮನ್ ಕ್ಯಾಥೋಲಿಕ್ ಚರ್ಚ್ ನ ಪೋಪ್ ಫ್ರಾನ್ಸಿಸ್ ಅವರು ಇಂದು ಸಂತ ಪದವಿ ಪ್ರದಾನ ಮಾಡಿದರು. ತೆರೆಸಾ ಅವರ ಮರಣಾನಂತರ ನಡೆದ ಎರಡು ಪವಾಡಗಲು ದೃಢಪಟ್ಟ ಹಿನ್ನೆಲೆಯಲ್ಲಿ ಅವರಿಗೆ ಸಂತ ಪದವಿ ನೀಡಲಾಗಿದೆ.
ವಿಶ್ವದಾದ್ಯಂತ ಸುಮಾರು ಲಕ್ಷಕ್ಕೂ ಹೆಚ್ಚು ಜನರ ಸಮ್ಮುಖದಲ್ಲಿ ಪೋಪ್ ಫ್ರಾನ್ಸಿಸ್ ಅವರು ತೆರೆಸಾ ಅವರನ್ನು ಹೊಸ ಸಂತ ಎಂದು ಘೋಷಿಸಿದರು.
ಭಾರತದಿಂದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೇತೃತ್ವದ 12 ಮಂದಿಯ ನಿಯೋಗ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಎರಡು ರಾಜ್ಯ ಸರ್ಕಾರಗಳ ನಿಯೋಗ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಯಾದವು.
ಕೋಲ್ಕತಾದ ಬೀದಿ ಬೀದಿಗಳಲ್ಲಿ 45 ವರ್ಷಗಳ ಕಾಲ ಬಡವರು ಮತ್ತು ರೋಗಿಗಳ ಸೇವೆ ಮಾಡುತ್ತಾ ಬಂದ ತೆರೆಸಾ ಅವರ 2 ಪವಾಡಗಳು ಸಾಬೀತಾದ ಕಾರಣ ಅವರನ್ನು ಸಂತರೆಂದು ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ಪೋಪ್ ಫ್ರಾನ್ಸಿಸ್ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಕೋಲ್ಕತಾದಲ್ಲಿ ಸಂಭ್ರಮ ಮನೆಮಾಡಿದೆ. ಸಮಾರಂಧಲ್ಲಿ ಸಾಮೂಹಿಕ ಪ್ರಾರ್ಥನೆಗಳು ಸೇರಿದಂತೆ ಇನ್ನಿತರೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos