ಮಂಡ್ಯ ಬಂದ್ 
ಪ್ರಧಾನ ಸುದ್ದಿ

ತಮಿಳುನಾಡಿಗೆ ನೀರು: ಮಂಡ್ಯದಲ್ಲಿ 'ಕಾವೇರಿ'ದ ಪ್ರತಿಭಟನೆ

ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿವೆ...

ಮಂಡ್ಯ: ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿವೆ.

ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಸ್ತೆ ಮಧ್ಯೆ ಉರುಳು ಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ಪ್ರತಿಭಟನೆ ನಡೆಸುತ್ತಿರುವುದರಿಂದ ರಸ್ತೆ ಸಂಚಾರ ಅಸ್ತವಸ್ಯಗೊಂಡಿದೆ. ಇನ್ನು ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಸರ್ಕಾರಿ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಇದೇ ವೇಳೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಪದೇ ಪದೇ ಅನ್ಯಾಯವಾಗುತ್ತಿದ್ದು, ಕಾವೇರಿ ನದಿ ನೀರು ಹಂಚಿಕೆ ಪರ ವಾದಿಸುತ್ತಿರುವ ರಾಜ್ಯದ ಪರ ವಕೀಲರಾದ ಪಾಲಿ ನಾರಿಮನ್ ರನ್ನು ಕೈಬಿಡುವಂತೆ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ಅವರು ಹೇಳಿದ್ದಾರೆ.  

ಕನ್ನಡ ಪರ ಸಂಘಟನೆಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಇಂದು ಶಾಲಾ-ಕಾಲೇಜುಗಳಿಗೆ ಮಂಡ್ಯ ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ ರಜೆ ಘೋಷಿಸಿದ್ದಾರೆ.

ತಮಿಳುನಾಡಿಗೆ ಪ್ರತಿ ದಿನ 15 ಸಾವಿರ ಕ್ಯೂಸೆಕ್ಸ್ ನೀರನ್ನು 10 ದಿನ ಕಾಲ ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT