ಇನ್ಸಾಟ್‌-3ಡಿಆರ್‌ 
ಪ್ರಧಾನ ಸುದ್ದಿ

ಇಸ್ರೋ ಸಾಧನೆಗೆ ಮತ್ತೊಂದು ಗರಿ: ಇನ್ಸಾಟ್‌-3ಡಿಆರ್‌ ಯಶಸ್ವಿ ಉಡಾವಣೆ

ಭಾರತೀಯ ಬಾಹ್ಯಾಕಾಶ ಸ೦ಸ್ಥೆ ಇಸ್ರೋ ಸ್ವದೇಶಿ ತಂತ್ರಜ್ಞಾನ ಬಳಸಿ ಇಸ್ರೋ ನಿರ್ಮಿಸಿದ ಅತ್ಯಾಧುನಿಕ ಹವಾಮಾನ ಉಪಗ್ರಹ ಇನ್ಸಾಟ್‌-3ಡಿಆರ್‌....

ಚೆನ್ನೈ: ಭಾರತೀಯ ಬಾಹ್ಯಾಕಾಶ ಸ೦ಸ್ಥೆ ಇಸ್ರೋ ಸ್ವದೇಶಿ ತಂತ್ರಜ್ಞಾನ ಬಳಸಿ ಇಸ್ರೋ ನಿರ್ಮಿಸಿದ ಅತ್ಯಾಧುನಿಕ ಹವಾಮಾನ ಉಪಗ್ರಹ ಇನ್ಸಾಟ್‌-3ಡಿಆರ್‌ ಅನ್ನು ಗುರುವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಇಂದು ಸಂಜೆ ನಿಗದಿತ ವೇಳೆಗಿಂತ(4.10) ಸುಮಾರು 40 ನಿಮಿಷಗಳ ವಿಳಂಬವಾಗಿ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಅತ್ಯಾಧುನಿಕ ಹವಾಮಾನ ಉಪಗ್ರಹ ಇನ್ಸಾಟ್‌-3ಡಿಆರ್‌ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.
ಸ್ವದೇಶಿ ಕ್ರಯೋಜೆನಿಕ್‌ ಎಂಜಿನ್‌ನಿಂದ ಚಾಲನೆಗೊಳ್ಳುವ ಜಿಎಸ್‌ಎಲ್‌ವಿ- ಎಫ್05 ರಾಕೆಟ್‌, ಆಂಧ್ರಪ್ರದೇಶದ ಶ್ರೀಹರಿಕೋಟಾದ ಉಡ್ಡಯನ ನೆಲೆಯಿಂದ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಹೊತ್ತೊಯ್ದಿದೆ. ಕ್ರಯೋಜೆನಿಕ್‌ ಎಂಜಿನನ್ನು 4ನೇ ಬಾರಿಗೆ ಜಿಎಸ್‌ಎಲ್‌ವಿ ರಾಕೆಟ್‌ನಲ್ಲಿ ಬಳಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಜಿಎಸ್‌ಎಲ್‌ವಿ-ಎಫ್05ಯಲ್ಲಿ ಈ ಎಂಜಿನ್‌ ಪರೀಕ್ಷೆಗೆ ಒಳಪಡುತ್ತಿರುವುದು ಇದೇ ಮೊದಲು.
ಜಿಎಸ್‌ಎಲ್‌ವಿ-ಎಫ್ 5 ರಾಕೆಟ್‌ ಮೂಲಕ ನಭೋಮಂಡಲ ತಲುಪುವ 2211 ಕೆ.ಜಿ. ತೂಕದ ಇನ್ಸಾಟ್‌ -3ಡಿಆರ್‌ ಉಪಗ್ರಹ ನಂತರ ತನ್ನದೇ ಮುನ್ನೂಕುವ ಶಕ್ತಿ ಬಳಸಿಕೊಂಡು ತನ್ನ ಅಂತಿಮ ಗುರಿಯಾದ ಭೂಸ್ಥಿರ ಕಕ್ಷೆಯನ್ನು ಸೇರಿಸಿಕೊಳ್ಳಲಿದೆ.
ಈ ಅತ್ಯಾಧುನಿಕ ಉಪಗ್ರಹವು ಇನ್ಸಾಟ್ ಸರಣಿ ಉಪಗ್ರಹಗಳಲ್ಲಿ ಒಂದಾಗಿದ್ದು, ಈ ಹಿಂದೆ 2013ರಲ್ಲಿ ಇದೇ ಸರಣಿಯ ಇನ್ಸಾಟ್-3ಡಿ ಉಪಗ್ರಹವನ್ನು ಫ್ರಾನ್ಸ್ ನ ಗಯಾನದಿಂದ ಉಡಾವಣೆ  ಮಾಡಲಾಗಿತ್ತು. ಇದಾದ ಬಳಿಕ 2015ರ ಆಗಸ್ಟ್ ನಲ್ಲಿ ಜಿಸ್ಯಾಟ್-6 ಉಪಗ್ರಹವನ್ನು ಜಿಎಸ್ ಎಲ್ ವಿ-ಡಿ6 ಉಡಾವಣಾ ವಾಹಕದ ಮೂಲಕ ಇದೇ ಶ್ರೀಹರಿಕೋಟಾದಿಂದ ಉಡಾವಣೆ ಮಾಡಿ ಇಸ್ರೋ ಯಶಸ್ಸು ಸಾಧಿಸಿತ್ತು. ಇದರ ಮುಂದುವರೆದ ಭಾಗವಾಗಿ ಇಂದು ಇನ್ಸಾಟ್ 3ಡಿಆರ್ ಉಪಗ್ರಹವನ್ನು ಇಸ್ರೋ ಉಡಾವಣೆ ಮಾಡಿದೆ. 
ಇದು ದೇಶೀಯವಾಗಿ ಅಭಿವೃದ್ಧಿಪಡಿಸಿದ ಹವಾಮಾನ ಮುನ್ಸೂಚನೆ ನೀಡುವ ಉಪಗ್ರಹವಾಗಿದೆ. ಸಾಗರದ ಮೇಲ್ಭಾಗದಲ್ಲಿ ಬೀಸುವ ಮಾರುತಗಳನ್ನು ವೀಕ್ಷಿಸುವ ಮೂಲಕ  ಚಂಡಮಾರುತವನ್ನು ಮೊದಲೇ ಗ್ರಹಿಸಿ ಎಚ್ಚರಿಕೆ ನೀಡುತ್ತದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT