ಇನ್ಸಾಟ್‌-3ಡಿಆರ್‌ 
ಪ್ರಧಾನ ಸುದ್ದಿ

ಇಸ್ರೋ ಸಾಧನೆಗೆ ಮತ್ತೊಂದು ಗರಿ: ಇನ್ಸಾಟ್‌-3ಡಿಆರ್‌ ಯಶಸ್ವಿ ಉಡಾವಣೆ

ಭಾರತೀಯ ಬಾಹ್ಯಾಕಾಶ ಸ೦ಸ್ಥೆ ಇಸ್ರೋ ಸ್ವದೇಶಿ ತಂತ್ರಜ್ಞಾನ ಬಳಸಿ ಇಸ್ರೋ ನಿರ್ಮಿಸಿದ ಅತ್ಯಾಧುನಿಕ ಹವಾಮಾನ ಉಪಗ್ರಹ ಇನ್ಸಾಟ್‌-3ಡಿಆರ್‌....

ಚೆನ್ನೈ: ಭಾರತೀಯ ಬಾಹ್ಯಾಕಾಶ ಸ೦ಸ್ಥೆ ಇಸ್ರೋ ಸ್ವದೇಶಿ ತಂತ್ರಜ್ಞಾನ ಬಳಸಿ ಇಸ್ರೋ ನಿರ್ಮಿಸಿದ ಅತ್ಯಾಧುನಿಕ ಹವಾಮಾನ ಉಪಗ್ರಹ ಇನ್ಸಾಟ್‌-3ಡಿಆರ್‌ ಅನ್ನು ಗುರುವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಇಂದು ಸಂಜೆ ನಿಗದಿತ ವೇಳೆಗಿಂತ(4.10) ಸುಮಾರು 40 ನಿಮಿಷಗಳ ವಿಳಂಬವಾಗಿ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಅತ್ಯಾಧುನಿಕ ಹವಾಮಾನ ಉಪಗ್ರಹ ಇನ್ಸಾಟ್‌-3ಡಿಆರ್‌ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.
ಸ್ವದೇಶಿ ಕ್ರಯೋಜೆನಿಕ್‌ ಎಂಜಿನ್‌ನಿಂದ ಚಾಲನೆಗೊಳ್ಳುವ ಜಿಎಸ್‌ಎಲ್‌ವಿ- ಎಫ್05 ರಾಕೆಟ್‌, ಆಂಧ್ರಪ್ರದೇಶದ ಶ್ರೀಹರಿಕೋಟಾದ ಉಡ್ಡಯನ ನೆಲೆಯಿಂದ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಹೊತ್ತೊಯ್ದಿದೆ. ಕ್ರಯೋಜೆನಿಕ್‌ ಎಂಜಿನನ್ನು 4ನೇ ಬಾರಿಗೆ ಜಿಎಸ್‌ಎಲ್‌ವಿ ರಾಕೆಟ್‌ನಲ್ಲಿ ಬಳಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಜಿಎಸ್‌ಎಲ್‌ವಿ-ಎಫ್05ಯಲ್ಲಿ ಈ ಎಂಜಿನ್‌ ಪರೀಕ್ಷೆಗೆ ಒಳಪಡುತ್ತಿರುವುದು ಇದೇ ಮೊದಲು.
ಜಿಎಸ್‌ಎಲ್‌ವಿ-ಎಫ್ 5 ರಾಕೆಟ್‌ ಮೂಲಕ ನಭೋಮಂಡಲ ತಲುಪುವ 2211 ಕೆ.ಜಿ. ತೂಕದ ಇನ್ಸಾಟ್‌ -3ಡಿಆರ್‌ ಉಪಗ್ರಹ ನಂತರ ತನ್ನದೇ ಮುನ್ನೂಕುವ ಶಕ್ತಿ ಬಳಸಿಕೊಂಡು ತನ್ನ ಅಂತಿಮ ಗುರಿಯಾದ ಭೂಸ್ಥಿರ ಕಕ್ಷೆಯನ್ನು ಸೇರಿಸಿಕೊಳ್ಳಲಿದೆ.
ಈ ಅತ್ಯಾಧುನಿಕ ಉಪಗ್ರಹವು ಇನ್ಸಾಟ್ ಸರಣಿ ಉಪಗ್ರಹಗಳಲ್ಲಿ ಒಂದಾಗಿದ್ದು, ಈ ಹಿಂದೆ 2013ರಲ್ಲಿ ಇದೇ ಸರಣಿಯ ಇನ್ಸಾಟ್-3ಡಿ ಉಪಗ್ರಹವನ್ನು ಫ್ರಾನ್ಸ್ ನ ಗಯಾನದಿಂದ ಉಡಾವಣೆ  ಮಾಡಲಾಗಿತ್ತು. ಇದಾದ ಬಳಿಕ 2015ರ ಆಗಸ್ಟ್ ನಲ್ಲಿ ಜಿಸ್ಯಾಟ್-6 ಉಪಗ್ರಹವನ್ನು ಜಿಎಸ್ ಎಲ್ ವಿ-ಡಿ6 ಉಡಾವಣಾ ವಾಹಕದ ಮೂಲಕ ಇದೇ ಶ್ರೀಹರಿಕೋಟಾದಿಂದ ಉಡಾವಣೆ ಮಾಡಿ ಇಸ್ರೋ ಯಶಸ್ಸು ಸಾಧಿಸಿತ್ತು. ಇದರ ಮುಂದುವರೆದ ಭಾಗವಾಗಿ ಇಂದು ಇನ್ಸಾಟ್ 3ಡಿಆರ್ ಉಪಗ್ರಹವನ್ನು ಇಸ್ರೋ ಉಡಾವಣೆ ಮಾಡಿದೆ. 
ಇದು ದೇಶೀಯವಾಗಿ ಅಭಿವೃದ್ಧಿಪಡಿಸಿದ ಹವಾಮಾನ ಮುನ್ಸೂಚನೆ ನೀಡುವ ಉಪಗ್ರಹವಾಗಿದೆ. ಸಾಗರದ ಮೇಲ್ಭಾಗದಲ್ಲಿ ಬೀಸುವ ಮಾರುತಗಳನ್ನು ವೀಕ್ಷಿಸುವ ಮೂಲಕ  ಚಂಡಮಾರುತವನ್ನು ಮೊದಲೇ ಗ್ರಹಿಸಿ ಎಚ್ಚರಿಕೆ ನೀಡುತ್ತದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT