ವಿ ಸೋಮಣ್ಣ 
ಪ್ರಧಾನ ಸುದ್ದಿ

ಮಾಜಿ ಸಚಿವ ಸೋಮಣ್ಣ ವಿರುದ್ಧ ಎಸಿಬಿ ತನಿಖೆಗೆ ಲೋಕಾಯುಕ್ತ ಕೋರ್ಟ್ ಆದೇಶ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ಅವರ ವಿರುದ್ಧ ತನಿಖೆ ನಡೆಸುವಂತೆ...

ಬೆಂಗಳೂರ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ಅವರ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತ ಕೋರ್ಟ್ ಬುಧವಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಆದೇಶಿಸಿದೆ.
ಸೋಮಣ್ಣ ಅವರ ವಿರುದ್ಧ ಮೂಡಲಪಾಳ್ಯದ ರಾಮಕೃಷ್ಣ ಎಂಬುವರು ಲೋಕಾಯುಕ್ತ ಕೋರ್ಟಿನಲ್ಲಿ ಖಾಸಗಿ ದೂರು ಸಲ್ಲಿಸಿದ್ದು, ಚುನಾವಣಾ ಆಯೋಗ ಹಾಗೂ ಲೋಕಾಯುಕ್ತಕ್ಕೆ ಈ ಹಿಂದೆ ಸಲ್ಲಿಸಲಾದ ಆಸ್ತಿ ವಿವರಕ್ಕೂ ಇಂದಿನ ಆಸ್ತಿ ವಿವರಕ್ಕೂ ಶೇ205 ರಷ್ಟು ಏರಿಕೆ ಕಂಡು ಬಂದಿದೆ ಎಂದು ಆರೋಪಿಸಿದ್ದರು.
ದೂರಿನ ವಿಚಾರಣೆ ನಡೆಸಿದ ಕೋರ್ಟ್, ಸೋಮಣ್ಣ ಅವರ ವಿರುದ್ಧ ತನಿಖೆ ನಡೆಸಿ ಡಿಸೆಂಬರ್ 17ರೊಳಗೆ ವರದಿ ಸಲ್ಲಿಸುವಂತೆ ಎಸಿಬಿಗೆ ಸೂಚಿಸಿದೆ.
ಸೋಮಣ್ಣ ಅವರು ದೊಡ್ಡಬಳ್ಳಾಪುರ ಬಳಿ 40 ಎಕರೆ ಅಕ್ರಮ ಭೂಮಿ ಹೊಂದಿರುವ ಆರೋಪ ಕೇಳಿ ಬಂದಿತ್ತು. ಆದರೆ, ಈ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಲೋಕಾಯುಕ್ತ ಕೋರ್ಟಿಗೆ ಬಿ ರಿಪೋರ್ಟ್ ಸಲ್ಲಿಸಿದ್ದರು.
ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟನ್ನು ತಿರಸ್ಕರಿಸಿದ್ದ ಲೋಕಾಯುಕ್ತ ನ್ಯಾಯಾಧೀಶರು ಎಲ್ಲ ಆರೋಪಿಗಳ ವಿರುದ್ಧ ಸಮನ್ಸ್ ಜಾರಿ ಮಾಡಿದ್ದರು. ಕರ್ನಾಟಕ ಚುನಾವಣಾ ಕಾವಲು (ಕೆಇಡಬ್ಲ್ಯೂ) ಸಂಸ್ಥೆ 2004 ರಿಂದ 2008 ರ ತನಕದ ಅದಾಯ ಘೋಷಣೆ ಮಾಡಿರುವ ಶಾಸಕರ ಮಾಹಿತಿ ವಿಶ್ಲೇಷಣೆ ಮಾಡಿ ವಿವರ ಬಹಿರಂಗ ಮಾಡಿದೆ. ಇದರಲ್ಲಿ ಕರ್ನಾಟಕದ ಕೋಟಿ ಗಳಿಕೆ ಮಾಡಿರುವ ಶಾಸಕ, ಸಚಿವರ ವಿವರಗಳಿದೆ. ವಿ. ಸೋಮಣ್ಣ ಅವರ ಹೆಸರು ಕೂಡಾ ಈ ಪಟ್ಟಿಯಲ್ಲಿ ಕಾಣಿಸಿದೆ. ಚರಾಸ್ತಿ 9.16 ಕೋಟಿ ಹಾಗೂ ಸ್ಥಿರಾಸ್ತಿ 1.83 ಕೋಟಿ ರು ಘೋಷಿತ ಆಸ್ತಿಯಾಗಿದೆ. ಈಗ ಈ ಮೊತ್ತ ಶೇ 205ರಷ್ಟು ಏರಿಕೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT