ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ಪ್ರಧಾನ ಸುದ್ದಿ

ಭರವಸೆ ಈಡೇರಿಸಿದ ಮಮತಾ; ಸಿಂಗೂರು ರೈತರಿಗೆ ಜಮೀನು ವಾಪಸ್

ಹಲವು ವರ್ಷಗಳ ಹಿಂದ ತಾವು ನೀಡಿದ ವಚನವನ್ನು ಈಡೇರಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಿಂಗೂರಿನ ರೈತರಿಗೆ 9,117 ಜಮೀನು ದಾಖಲೆಗಳನ್ನು ಹಿಂದಿರುಗಿಸಿದ್ದು,

ಸಿಂಗೂರು: ಹಲವು ವರ್ಷಗಳ ಹಿಂದ ತಾವು ನೀಡಿದ ವಚನವನ್ನು ಈಡೇರಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಿಂಗೂರಿನ ರೈತರಿಗೆ 9,117 ಜಮೀನು ದಾಖಲೆಗಳನ್ನು ಹಿಂದಿರುಗಿಸಿದ್ದು, 800 ಕೂಲಿ ಕಾರ್ಮಿಕರಿಗೆ ಪರಿಹಾರ ನೀಡಿದ್ದಾರೆ. ಟಾಟಾ ಮೋಟಾರ್ಸ್ ಸಂಸ್ಥೆಯ ನ್ಯಾನೋ ಯೋಜನೆಗಾಗಿ ಇವರ ಜಮೀನುಗಳನ್ನು ವಶಪಡಿಸಿಕೊಳ್ಳಲಾಗಿತ್ತು. 
ರಾಜ್ಯ ಮತ್ತು ಮುಖ್ಯಮಂತ್ರಿಗಳಿಗೆ ಜೈಕಾರ ಘೋಷಣೆಯ ನಡುವೆ ರೈತರ ಕುಟುಂಬಗಳಿಗೆ ವೈಯಕ್ತಿಕವಾಗಿ ಮಮತಾ ದಾಖಲೆಗಳನ್ನು ಹಿಂದಿರುಗಿಸಿದ್ದಾರೆ. ಸನಾಪಾರದ ಸಿಂಗೂರ್ ದಿವಸ್ ಪ್ರದೇಶದಲ್ಲಿ ಈ ಪ್ರಕ್ರಿಯೆ ನಡೆದಿದೆ. 
ದುರ್ಗಾಪುರ ಎಕ್ಸ್ಪ್ರೆಸ್ ವೇ ನ ಈ ಜಾಗದಲ್ಲಿ 2008 ರಲ್ಲಿ ಮಮತಾ ಬ್ಯಾನರ್ಜಿ ರೈತರ ಜಮೀನು ಹಿಂದಿರುಗಿಸುವಂತೆ ಆಗ್ರಹಿಸಿ 16 ದಿನಗಳ ಧರಣಿ ಕುಳಿತಿದ್ದರು. 997.11 ಎಕರೆ ಜಾಗದಲ್ಲಿ ಸುಮಾರು 400 ಎಕರೆ ಜಮೀನನ್ನು ಒತ್ತಾಯಪೂರ್ವಕವಾಗಿ ಎಡಪಕ್ಷಗಳ ಸರ್ಕಾರ ವಶಪಡಿಸಿಕೊಂಡಿತ್ತು. 
ಈ ಸಮಯದಲ್ಲಿ ನರ್ಮದಾ ಬಚಾವೋ ಆಂದೋಲನದ ಸದಸ್ಯೆ ಮೇಧಾ ಪಾಟ್ಕರ್ ಸೇರಿದಂತೆ ಹಲವು ಬುದ್ಧಿಜೀವಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. 
ಕೆಲವು ದಿನಗಳ ಹಿಂದೆಯಷ್ಟೇ ಜಮೀನು ವಶಪಡಿಸಿಕೊಂಡಿರುವುದು ಕಾನೂನು ಬಾಹಿರ ಎಂದಿದ್ದ ಸುಪ್ರೀಂ ಕೋರ್ಟ್ ಜಮೀನು ಹಿಂದಿರುಗಿಸಲು ಆದೇಶಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT