ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ತಮಿಳುನಾಡು ಬಂದ್, ಕನ್ನಡಿಗರಿಗೆ ರಕ್ಷಣೆ ಕೋರಿ ಜಯಾಗೆ ಸಿಎಂ ಪತ್ರ

ಕರ್ನಾಟಕದಲ್ಲಿ ತಮಿಳರನ್ನು ಗುರಿಯಾಗಿಸಿಕೊಂಡು ಹಿಂಸಾಚಾರ ನಡೆಸುತ್ತಿರುವುದನ್ನು ಖಂಡಿಸಿ ಹಾಗೂ ಕಾವೇರಿ ವಿವಾದಕ್ಕೆ...

ಬೆಂಗಳೂರು: ಕರ್ನಾಟಕದಲ್ಲಿ ತಮಿಳರನ್ನು ಗುರಿಯಾಗಿಸಿಕೊಂಡು ಹಿಂಸಾಚಾರ ನಡೆಸುತ್ತಿರುವುದನ್ನು ಖಂಡಿಸಿ ಹಾಗೂ ಕಾವೇರಿ ವಿವಾದಕ್ಕೆ ಶಾಸ್ವತ ಪರಿಹಾರಕ್ಕೆ ಒತ್ತಾಯಿಸಿ ನಾಳೆ ತಮಿಳುನಾಡು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನಲ್ಲಿರುವ ಕನ್ನಡಿಗರಿಗೆ ರಕ್ಷಣೆ ಕೋರಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಗುರುವಾರ ಪತ್ರ ಬರೆದಿದ್ದಾರೆ.
ತಮಿಳುನಾಡಿನಲ್ಲಿ ನಾಳೆ ಕೆಲವು ಸಂಘಟನೆಗಳು ಬಂದ್‍ಗೆ ಕರೆ ನೀಡಿರುವ ವಿಚಾರ ತಿಳಿದು ನನಗೆ ಕಳವಳವಾಗಿದೆ. ಈ ವೇಳೆ ಎರಡು ರಾಜ್ಯಗಳ ಜನರ ನಡುವೆ ವೈರತ್ವ ಬೆಳೆದರೆ ಇದರಿಂದ ಎರಡೂ ರಾಜ್ಯಗಳಿಗೆ ಹಾನಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 16ರಂದು ನಿಮ್ಮಲ್ಲಿ ನಡೆಯುವ ಬಂದ್ ವೇಳೆ ಯಾವುದೇ ಆಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಲ್ಲದೆ ತಮಿಳುನಾಡಿನಲ್ಲಿರುವ ಕನ್ನಡಿಗರ ಜೀವ ರಕ್ಷಣೆ ಹಾಗೂ ಅವರ ಆಸ್ತಿ ಪಾಸ್ತಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.
ಈ ಮಧ್ಯೆ ರೈತಪರ ಸಂಘಟನೆಗಳು ಹಾಗೂ ವ್ಯಾಪಾರಿಗಳು ಕರೆ ನೀಡಿರುವ ತಮಿಳುನಾಡು ಬಂದ್ ಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ತಮಿಳುನಾಡು ಕಾಂಗ್ರೆಸ್ ಹಾಗೂ ಡಿಎಂಕೆ ಪಕ್ಷದ ವರಿಷ್ಠ ಕರುಣಾನಿಧಿ ಅವರು ಬೆಂಬಲ ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್‌ ತೈಲ ವಹಿವಾಟಿಗೆ ಅಮೆರಿಕದ ಕಡಿವಾಣ: 4 ಭಾರತೀಯ ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ