ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಸಿಂಗ್ ಯಾದವ್ 
ಪ್ರಧಾನ ಸುದ್ದಿ

ಚುನಾವಣೆ ಸನಿಹದಲ್ಲಿರುವಾಗ ಕುಟುಂಬ ಸದಸ್ಯರು ಒಟ್ಟಾಗಿರಬೇಕು: ಎಸ್ ಪಿ ಮುಖಂಡ

ಮುಂದಿನ ವರ್ಷದ ವಿಧಾನಸಭಾ ಚುನಾವಣಾ ಸನಿಹದಲ್ಲಿದ್ದು, ಉತ್ತರ ಪ್ರದೇಶದ ಆಡಳಿತ ಸಮಾಜವಾದಿ ಪಕ್ಷ ಒಗ್ಗಟ್ಟಾಗಿ ಇರಬೇಕಾದ ಅವಶ್ಯಕತೆ ಇದು ಎಂದು ಪಕ್ಷದ ಮುಖಂಡ ಶಿವಪಾಲ್ ಸಿಂಗ್ ಯಾದವ್

ಲಖನೌ: ಮುಂದಿನ ವರ್ಷದ ವಿಧಾನಸಭಾ ಚುನಾವಣಾ ಸನಿಹದಲ್ಲಿದ್ದು, ಉತ್ತರ ಪ್ರದೇಶದ ಆಡಳಿತ ಸಮಾಜವಾದಿ ಪಕ್ಷ ಒಗ್ಗಟ್ಟಾಗಿ ಇರಬೇಕಾದ ಅವಶ್ಯಕತೆ ಇದು ಎಂದು ಪಕ್ಷದ ಮುಖಂಡ ಶಿವಪಾಲ್ ಸಿಂಗ್ ಯಾದವ್ ಗುರುವಾರ ಹೇಳಿದ್ದಾರೆ. 
"ಚುನಾವಣೆ ಸನಿಹದಲ್ಲಿದೆ. ಕುಟುಂಬ ಮತ್ತು ಉಳಿದವರೆಲ್ಲರೂ ಒಗ್ಗಟ್ಟಿನಿಂದಿರುವ ಸಮಯ ಇದು" ಎಂದು ಸಮಾಜವಾದಿ ಪಕ್ಷದಲ್ಲಿ ಬಿರುಕು ಬಿಟ್ಟಿದೆ ಎಂವ ಸುದ್ದಿಗಳ ನಡುವೆ ನವದೆಹಲಿಗೆ ಬಂದ ಶಿವಪಾಲ್ ಹೇಳಿದ್ದಾರೆ. 
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಗುರಿ ಬಹುಮತವನ್ನು ಮುಟ್ಟುವುದು ಎಂದಿರುವ ಅವರು, ಪಕ್ಷದ ವ್ಯವಹಾರಗಳಲ್ಲಿ ಸರ್ವಾಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರದ್ದೇ ಕೊನೆಯ ಮಾತು ಎಂದಿದ್ದಾರೆ. 
ಇತ್ತೀಚೆಗಷ್ಟೇ ರಾಜ್ಯದಲ್ಲಿ ಪಕ್ಷದ ಅಧ್ಯಕ್ಷರಾಗಿ ಅಖಿಲೇಶ್ ಯಾದವ್ ಅವರನ್ನು ಬದಲಿಸಿದ್ದ ಶಿವಪಾಲ್ ಯಾದವ್ ಅವರಿಂದ ಖಾತೆಗಳನ್ನು ಮುಖ್ಯಮಂತ್ರಿ ಅಖಿಲೇಶ್ ಕಸಿದುಕೊಂಡ ಎರಡು ದಿನಗಳ ನಂತರ ಶಿವಪಾಲ್ ಮಾತನಾಡಿದ್ದಾರೆ. 
"ನೇತಾಜಿ (ಮುಲಾಯಂ ಸಿಂಗ್) ನಿರ್ಧಾರವನ್ನು ಪಕ್ಷದಲ್ಲಿ ಎಲ್ಲರು ಒಪ್ಪಿಕೊಳ್ಳಬೇಕಿರುತ್ತದೆ. ಯಾರು ಅವರ ನಿರ್ಧಾರಕ್ಕೆ ಸವಾಲೆಸೆಯುವಂತಿಲ್ಲ" ಎಂದು ಅವರು ಹೇಳಿದ್ದಾರೆ. 
"ನೇತಾಜಿ ಅವರನ್ನು (ಅಖಿಲೇಶ್ ಯಾದವ್) ಮುಖ್ಯಮಂತ್ರಿಯಾಗಿ ನೇಮಿಸಿದರು ಮತ್ತು ನಾನದನ್ನು ಒಪ್ಪಿಕೊಂಡಿದ್ದೇನೆ" ಎಂದು ಶಿವಪಾಲ್ ಯಾದವ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT