ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೇಮ ಖಂಡು 
ಪ್ರಧಾನ ಸುದ್ದಿ

ಅರುಣಾಚಲದಲ್ಲಿ ಕಾಂಗ್ರೆಸ್ ಕೈಬಿಟ್ಟು ಬಿಜೆಪಿ ಮೈತ್ರಿ ಪಕ್ಷ ಸೇರಿದ ಮುಖ್ಯಮಂತ್ರಿ ಮತ್ತು 42 ಶಾಸಕರು

ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೇಮ ಖಂಡು ಸೇರಿದಂತೆ 43 ಜನ ಕಾಂಗ್ರೆಸ್ ಶಾಸಕರು ಪಕ್ಷ ತೊರೆದು ಬಿಜೆಪಿ ಮೈತ್ರಿ ಪಕ್ಷ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ (ಪಿಪಿಎ) ಸೇರಿದ್ದಾರೆ.

ಇಟಾನಗರ್: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೇಮ ಖಂಡು ಸೇರಿದಂತೆ 43 ಜನ ಕಾಂಗ್ರೆಸ್ ಶಾಸಕರು ಪಕ್ಷ ತೊರೆದು ಬಿಜೆಪಿ ಮೈತ್ರಿ ಪಕ್ಷ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ (ಪಿಪಿಎ) ಸೇರಿದ್ದಾರೆ.
"ಪಿಪಿಎ ಪಕ್ಷದೊಂದಿಗೆ ಕಾಂಗ್ರೆಸ್ ಪಕ್ಷವನ್ನು ವಿಲೀನಗೊಳಿಸುತ್ತಿರುವುದಾಗಿ" ಸಭಾಪತಿ ವಾಂಗ್ಕಿ ಲೊವಾಂಗ್ ಅವರಿಗೆ ಖಂಡು ಹೇಳಿದ್ದಾರೆ. 
ಕಾಂಗ್ರೆಸ್ ಶಾಸಕರು ನಮ್ಮ ಪಕ್ಷ ಸೇರುತ್ತಿದ್ದಾರೆ ಎಂದಿರುವ ಪಿಪಿಎ ಅಧ್ಯಕ್ಷ ಕಮೆಂಗ್ ರಿಂಗು "ತಾತ್ಕಾಲಿಕ ಗಡಿಪಾರಿನ ನಂತರ ಮನೆಗೆ ವಾಪಸಾಗುತ್ತಿದ್ದಾರೆ" ಎಂದು ಅರುಣಾಚಲ ಪ್ರದೇಶದ ಅಚ್ಚರಿ ಬೆಳವಣಿಗೆಯ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ. 
60 ಸದ್ಯಸ್ಯರ ಬಲಾಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ ನ 44 ಶಾಸಕರಿದ್ದು, ಕಾಂಗ್ರೆಸ್ ಪಕ್ಷವನ್ನು ತೊರೆಯದ ಒಬ್ಬರೇ ಶಾಸಕರೆಂದರೆ ಮಾಜಿ ಮುಖ್ಯಮಂತ್ರಿ ನಬಾಮ್ ತೂಕಿ.
ಜುಲೈ ನಲ್ಲಿ ಆಗಿನ ಮುಖ್ಯಮಂತ್ರಿ ತೂಕಿ ವಿರುದ್ಧ ಕಾಂಗ್ರೆಸ್ ಸದಸ್ಯರು ಬಂಡಾಯವೆದ್ದಿದ್ದಕ್ಕೆ ಅವರನ್ನು ಪದಚ್ಯುತಿಗೊಳಿಸಿ ಖಂಡು ಅವರನ್ನು ರಾಜ್ಯ ಸರ್ಕಾರದ ಮುಖ್ಯಸ್ಥನನ್ನಾಗಿ ನೇಮಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT