ಉರಿ ಸೆಕ್ಟರ್ ನಲ್ಲಿ ಉಗ್ರ ದಾಳಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಉರಿ ಉಗ್ರ ದಾಳಿ; ಜೈಷ್ ಇ ಮೊಹಮದ್ ಸಂಘಟನೆಯಿಂದ ಕುಕೃತ್ಯ ಎಂದ ಭಾರತೀಯ ಸೇನೆ

ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಭೀಕರ ಉಗ್ರ ದಾಳಿಯನ್ನು ಕುಖ್ಯಾತ ಉಗ್ರಗಾಮಿ ಸಂಘಟನೆ ಜೈಶ್ ಇ ಮೊಹಮದ್ ಉಗ್ರಗಾಮಿಗಳು ಮಾಡಿದ್ದಾರೆ ಎಂದು ಭಾರತೀಯ ಸೇನಾ ಮುಖ್ಯಸ್ಥರು ತಿಳಿಸಿದ್ದಾರೆ.

ಶ್ರೀನಗರ: ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಭೀಕರ ಉಗ್ರ ದಾಳಿಯನ್ನು ಕುಖ್ಯಾತ ಉಗ್ರಗಾಮಿ ಸಂಘಟನೆ ಜೈಶ್ ಇ ಮೊಹಮದ್ ಉಗ್ರಗಾಮಿಗಳು ಮಾಡಿದ್ದಾರೆ ಎಂದು ಭಾರತೀಯ ಸೇನಾ  ಮುಖ್ಯಸ್ಥರು ತಿಳಿಸಿದ್ದಾರೆ.

ಉರಿ ಸೆಕ್ಟರ್ ನಲ್ಲಿ ನಡೆದ ಉಗ್ರ ದಾಳಿ ಸಂಬಂಧ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಅವರು, ಮಾಸ್ಟರ್ ಮೈಂಡ್ ಅಜರ್ ಮಸೂದ್  ನೇತೃತ್ವದ ಜೈಶ್ ಇ ಮೊಹಮದ್ ಸಂಘಟನೆಯ ಉಗ್ರರು ಈ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 17 ಯೋಧರು ಹುತಾತ್ಮರಾಗಿದ್ದು, 4 ಮಂದಿ ಉಗ್ರರು ಹತರಾಗಿದ್ದಾರೆ. ಉರಿ ಸೆಕ್ಟರ್ ನಲ್ಲಿ  ಸೈನಿಕರ ಸ್ಥಳಾಂತರ ಪ್ರಕ್ರಿಯೆ ನಡೆಯುತ್ತಿದ್ದ ವೇಳೆಯಲ್ಲಿ ಬೆಳಗ್ಗೆ ಸುಮಾರು 5.30ರ ಸುಮಾರಿನಲ್ಲಿ ಉಗ್ರರು ಏಕಾಏಕಿ ದಾಳಿ ನಡೆಸಿದ್ದಾರೆ. ಕ್ಯಾಂಪ್ ಟೆಂಟ್ ಗೆ ಬೆಂಕಿ ಹೊತ್ತಿದ್ದರಿಂದ ಬಹುತೇಕ  ಯೋಧರು ಬೆಂಕಿಗಾಹುತಿಯಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆಯ ಯೋಧರು ಮೃತ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದು, ಈ ಪೈಕಿ 4 ಎಕೆ47 ಬಂದೂಕು,  ಗ್ರೆನೇಡ್ ಲಾಂಚರ್ ಗಳು, ಸಾಕಷ್ಟು ಜೀವಂತ ಗ್ರೆನೇಡ್ ಗಳು ಪತ್ತೆಯಾಗಿವೆ ಎಂದು ರಣ್ ಬೀರ್ ಸಿಂಗ್ ತಿಳಿಸಿದರು.

ಶ್ರೀನಗರ ಹೈವೇಯಲ್ಲಿ ಸ್ಫೋಟಕ್ಕೆ ಉಗ್ರರ ಯತ್ನ; ಮುಂದುವರೆದ ಶೋಧಕಾರ್ಯ

ಇನ್ನು ಶ್ರೀನಗರ ಹೆದ್ದಾರಿಯಲ್ಲಿ ಅವಿತಿದ್ದಾರೆ ಎಂದು ಹೇಳಲಾಗುತ್ತಿರುವ ಉಗ್ರರಿಗಾಗಿ ನಡೆಯುತ್ತಿರುವ ಶೋಧ ಕಾರ್ಯ ಮುಂದುವರೆದಿದ್ದು, ಹೆದ್ದಾರಿಯಾದ್ಯಂತ ಸೈನಿಕರು ಕಟ್ಟೆಚ್ಚರ  ವಹಿಸಿದ್ದಾರೆ. ಹೆದ್ದಾರಿಯುದ್ದಕ್ಕೂ ನಾಕಾಬಂದಿ ಹಾಕಲಾಗಿದ್ದು, ತೀವ್ರ ತಪಾಸಣೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT