ಕರ್ನಾಟಕ ಬಂದ್ ವೇಳೆ ಕನ್ನಡದ ನಟರು (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಕಾವೇರಿ ವಿವಾದ: ತಮಿಳುನಾಡಿನಲ್ಲಿ ಕನ್ನಡದ ನಟರ ವಿರುದ್ಧ ಪ್ರಕರಣ ದಾಖಲು

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ವಿಚಾರವಾಗಿ ಕರ್ನಾಟಕದಲ್ಲಿ ಭಾರಿ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ತಮಿಳುನಾಡಿನಲ್ಲಿ ಕನ್ನಡದ ಖ್ಯಾತ ನಟರ ವಿರುದ್ಧ ಪ್ರಕರಣ ದಾಖಲಾಗಿದೆ.

ಚೆನ್ನೈ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ವಿಚಾರವಾಗಿ ಕರ್ನಾಟಕದಲ್ಲಿ ಭಾರಿ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ತಮಿಳುನಾಡಿನಲ್ಲಿ ಕನ್ನಡದ ಖ್ಯಾತ ನಟರ ವಿರುದ್ಧ ಪ್ರಕರಣ  ದಾಖಲಾಗಿದೆ.

ಕನ್ನಡದ ಖ್ಯಾತ ನಟರಾದ ಪುನೀತ್ ರಾಜ್ ಕುಮಾರ್, ಉಪೇಂದ್ರ ಹಾಗೂ ದರ್ಶನ್ ತೂಗುದೀಪ ಅವರ ವಿರುದ್ಧ ತಮಿಳುನಾಡು ನ್ಯಾಯಾಲಯದಲ್ಲಿ ದೂರು ದಾಖಲಾಗಿದ್ದು, ಈ ನಟರು ತಮಿಳರ  ವಿರುದ್ಧ ಪ್ರಚೋದನಕಾರಿ ಭಾಷಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕಾವೇರಿ ವಿಚಾರವಾಗಿ ಕಳೆದ ಸೆಪ್ಟೆಂಬರ್ 9ರಂದು ನಡೆದ ಕರ್ನಾಟಕ ಬಂದ್ ವೇಳೆ ಈ ನಟರು ತಮಿಳರ ವಿರುದ್ಧ  ಪ್ರಚೋದನಕಾರಿಯಾಗಿ ಮಾತನಾಡಿದ್ದರು ಎಂದು ಆರೋಪಿಸಿ ತಮಿಳು ದೇಸಿಯ ಪೆರಮೈಪ್ಪು ಸಂಘಟನೆಯ ಸ್ಥಾಪಕಾಧ್ಯಕ್ಷ ಪಿ. ಇಳಂಗೋವನ್, ಕೊಯಮತ್ತೂರಿನ 2ನೇ ನ್ಯಾಯಾಂಗ  ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ.

ಮೂಲಗಳ ಪ್ರಕಾರ ಚಿತ್ರನಟರಾದ ಪುನೀತ್ ರಾಜ್‌ಕುಮಾರ್, ಉಪೇಂದ್ರ ಮತ್ತು ದರ್ಶನ್ ತೂಗುದೀಪ ವಿರುದ್ಧ ದೇಶದ್ರೋಹ, ಹಿಂಸೆ ಮತ್ತು ಉದ್ದೇಶಪೂರ್ವಕ ಗಲಭೆಗೆ ಪ್ರಚೋದನೆ ನೀಡಿದ  ಸೆಕ್ಷನ್‌ಗಳಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಇಳಂಗೋವನ್ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT