ಮದ್ರಾಸ್ ಹೈಕೋರ್ಟ್ 
ಪ್ರಧಾನ ಸುದ್ದಿ

ರಾಮಕುಮಾರ್ ಮರಣೋತ್ತರ ಪರೀಕ್ಷೆ ನಡೆಸದಂತೆ ರಾಯಪೇಟ್ಟ ಆಸ್ಪತ್ರೆಗೆ ಹೈಕೋರ್ಟ್ ಸೂಚನೆ

ಟೆಕ್ಕಿ ಸ್ವಾತಿ ಕೊಲೆ ಆರೋಪಿ ರಾಮಕುಮಾರ್ ಪುಝಲ್ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದು, ಇದು ಆತ್ಮಹತ್ಯೆ ಅಲ್ಲ ಎಂದು ರಾಮಕುಮಾರ್

ಚೆನ್ನೈ: ಟೆಕ್ಕಿ ಸ್ವಾತಿ ಕೊಲೆ ಆರೋಪಿ ರಾಮಕುಮಾರ್ ಪುಝಲ್ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದು, ಇದು ಆತ್ಮಹತ್ಯೆ ಅಲ್ಲ ಎಂದು ರಾಮಕುಮಾರ್ ಕುಟುಂಬ ಆರೋಪಿಸಿರುವ ಹಿನ್ನಲೆಯಲ್ಲಿ ಮುಂದಿನ ಆದೇಶ ನೀಡುವವರೆಗೆ ಮರಣೋತ್ತರ ಪರೀಕ್ಷೆ ನಡೆಸದಂತೆ ಹೈಕೋರ್ಟ್ ರಾಯಪೇಟ್ಟ ಸರ್ಕಾರಿ ಆಸ್ಪತ್ರೆಗೆ ಸೂಚಿಸಿದೆ. 
ಜೂನ್ 24 ರಂದು ನುಗಂಬಕ್ಕಂ ರೈಲ್ವೆ ನಿಲ್ದಾಣದಲ್ಲಿ ಕೊಲೆಯಾದ 24 ವರ್ಷದ ಸ್ವಾತಿ ಪ್ರಕರಣದಲ್ಲಿ ರಾಮಕುಮಾರ್ ಪ್ರಮುಖ ಮತ್ತು ಒಬ್ಬನೇ ಆರೋಪಿ. ಜುಲೈ 1 ರಂದು ತಿರುನೆಲ್ವೇಲಿಯ ಮೀನಾಕ್ಷಿಪುರಂನಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. 
ರಾಮಕುಮಾರ್ ತಂದೆಯ ಪರವಾಗಿ ವಾದ ಮಂಡಿಸಿದ ವಕೀಲ ಶಂಕರಸುಬ್ಬು, ಮುಂದಿನ ವಿಚಾರಣೆ ನಡೆಯುವವರಿಗೆ ಮರಣೋತ್ತರ ಪರೀಕ್ಷೆ ನಡೆಸದಂತೆ ಆದೇಶ ನೀಡಲು ನ್ಯಾಯಾಧೀಶ ಶಿವಜ್ಞಾನಂ ಅವರಲ್ಲಿ ಮನವಿ ಮಾಡಿದ್ದರು. ಹಾಗೆಯೇ ಮರಣೋತ್ತರ ಪರೀಕ್ಷೆ ನಡೆಸುವಾಗ ತಮ್ಮ ಕಕ್ಷಿದಾರ ಬಯಸುವ ವೈದ್ಯರು ಅಲ್ಲಿರುವಂತೆ ಮತ್ತು ಅದನ್ನು ವಿಡಿಯೋ ಮಾಡಲು ಅವಕಾಶ ಕೋರಿದ್ದರು. ಇದರ ವಿಚಾರಣೆಗೆ ಮರು ಅರ್ಜಿ ಸಲ್ಲಿಸುವಂತೆ ಕೋರ್ಟ್ ತಿಳಿಸಿದ್ದು, ಇಂದೇ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT