ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್(ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಸಮಾಜವಾದಿ ಪರಿವಾರ ಒಟ್ಟಾಗಿದೆ: ಅಖಿಲೇಶ್ ಯಾದವ್

ಸಮಾಜವಾದಿ ಪರಿವಾರ ಎಲ್ಲಾ ಸವಾಲುಗಳನ್ನು ಎದುರಿಸಲು ಒಟ್ಟಾಗಿದೆ ಎಂದು ಉತ್ತರ ಪ್ರದೇಶ...

ಲಕ್ನೋ: ಸಮಾಜವಾದಿ ಪರಿವಾರ ಎಲ್ಲಾ ಸವಾಲುಗಳನ್ನು ಎದುರಿಸಲು ಒಟ್ಟಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಿಳಿಸಿದ್ದಾರೆ.
ಹಿಂದೆ ಇದ್ದಂತೆ ಇಂದು ಕೂಡ ಸಮಾಜವಾದಿ ಪಕ್ಷ ಒಟ್ಟಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ಸರ್ಕಾರದ ಮುಂದಿರುವ ಸವಾಲುಗಳನ್ನು, ಕೋಮುವಾದಿ ಶಕ್ತಿಗಳ ವಿರುದ್ಧ ಒಟ್ಟಾಗಿ ಹೋರಾಡಲಿದೆ ಎಂದು ಹೇಳಿದರು. ರಾಜ್ಯ ಸಂಪುಟ ಸಭೆ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಹೀಗೆ ಹೇಳಿದರು.
ಚಿಕ್ಕಪ್ಪ ಶಿವಪಾಲ್ ಜೊತೆ ಕಲಹ, ಭಿನ್ನಾಭಿಪ್ರಾಯ, ಅಖಿಲೇಶ್ ಯಾದವ್ ಗೆ ಆಪ್ತರಾಗಿದ್ದ ಮೂವರು ವಿಧಾನ ಪರಿಷತ್ ಸದಸ್ಯರು ಸೇರಿ ಏಳು ಮಂದಿ ಪಕ್ಷದ ಕಾರ್ಯಕರ್ತರನ್ನು ಪಕ್ಷದಿಂದ ವಜಾಗೊಳಿಸಿದ್ದು ಹೀಗೆ ಕಳೆದೊಂದು ವಾರದಿಂದ ಸಮಾಜವಾದಿ ಪಕ್ಷ ಭಾರೀ ಸುದ್ದಿಯಾಗಿತ್ತು.
ಒಂದೆಂಬಂತೆ ಇದ್ದ ಯಾದವ ಕುಟುಂಬದಲ್ಲಿ ಶಿವಪಾಲ್ ಅಖಿಲೇಶ್ ವಿರುದ್ಧ ಸಾರ್ವಜನಿಕವಾಗಿ ಭಿನ್ನಾಭಿಪ್ರಾಯವನ್ನು ಹೊರಹಾಕಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ಇನ್ನು ಮುಂದೆ ಸಮಾಜವಾದಿ ಪರಿವಾರ ಒಟ್ಟಾಗಿ ಕೆಲಸ ಮಾಡಲಿದ್ದು ರಾಜ್ಯದಲ್ಲಿ ಮತ್ತೆ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದು ರಾಜ್ಯವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಲಿದೆ ಎಂದು ಹೇಳಿದರು.
ಯಾದವ ಕುಟುಂಬದಲ್ಲಿನ ಭಿನ್ನಾಭಿಪ್ರಾಯದ ಬಗ್ಗೆ ಸುದ್ದಿಗಾರರು ಕೇಳಿದಾಗ, ಪಕ್ಷದೊಳಗೆ ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT