ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಮಾರ್ಕಂಡೇಯ ಕಟ್ಜು 
ಪ್ರಧಾನ ಸುದ್ದಿ

ಕಾವೇರಿ ವಿವಾದ; 'ಕಾನೂನು ಕತ್ತೆ' ಮಾತನ್ನು ನಿಜವಾಗಿಸಿದ ನ್ಯಾ. ದೀಪಕ್ ಮಿಶ್ರ: ಕಟ್ಜು

ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ನೆನ್ನೆಯ ಸುಪ್ರೀಂ ಕೋರ್ಟ್ ತೀರ್ಪು ಕರ್ನಾಟಕದ ಜನತೆಗಷ್ಟೇ ಅಲ್ಲದೆ ತಟಸ್ಥ ವೀಕ್ಷಕರಿಗೂ ಆಕ್ರೋಶ ತರಿಸಿದೆ. ಒಂದು ದಿನದ ಹಿಂದೆಯಷ್ಟೇ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ನೆನ್ನೆಯ ಸುಪ್ರೀಂ ಕೋರ್ಟ್ ತೀರ್ಪು ಕರ್ನಾಟಕದ ಜನತೆಗಷ್ಟೇ ಅಲ್ಲದೆ ತಟಸ್ಥ ವೀಕ್ಷಕರಿಗೂ ಆಕ್ರೋಶ ತರಿಸಿದೆ. ಒಂದು ದಿನದ ಹಿಂದೆಯಷ್ಟೇ ಕಾವೇರಿ ಮೇಲುಸ್ತುವಾರಿ ಸಮಿತಿ ತಮಿಳುನಾಡಿಗೆ ದಿನಕ್ಕೆ 3000 ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶ ನೀಡಿದ್ದರು, ನೆನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ 6000 ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶ ನೀಡಿತ್ತು. 
ಮೆಟ್ಟೂರು ಜಲಾಶಯದಲ್ಲಿ ಹೆಚ್ಚು ನೀರು ಶೇಖರವಾಗಿದೆ ಆದರೆ ಕನ್ನಂಬಾಡಿ ಜಲಾಶಯದಲ್ಲಿ ಇರುವ ನೀರಿನ ಪ್ರಮಾಣ ಕಡಿಮೆಯಾಗಿದೆ ಎಂದು ಕರ್ನಾಟಕ ಪರ ವಕೀಲ ನಾರಿಮನ್ ವಾದಿಸಿ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದರು ಸಫಲವಾಗಿರಲಿಲ್ಲ. 
ಈಗ ಈ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಮಾರ್ಕಂಡೇಯ ಕಟ್ಜು, "ಕಾವೇರಿ ವಿವಾದದ ಈ ಆದೇಶದ ಮೂಲಕ ನ್ಯಾಯಾಧೀಶ ದೀಪಕ್ ಮಿಶ್ರ, ಡಿಕನ್ಸ್ ಹೇಳಿದ್ದ (ಆಲಿವರ್ ಟ್ವಿಸ್ಟ್ ನಲ್ಲಿ) 'ಕಾನೂನು ಕತ್ತೆ' ಎಂಬ ಮಾತನ್ನು ನಿಜಗೊಳಿಸಿದ್ದಾರೆ" ಎಂದು ಟ್ವೀಟ್ ಮಾಡಿದ್ದಾರೆ. 
ವಿಶ್ವವಿಖ್ಯಾತ ಕಾದಂಬರಿಕಾರ ಚಾರ್ಲ್ಸ್ ಡಿಕನ್ಸ್ ಅವರ ಆಲಿವರ್ ಟ್ವಿಸ್ಟ್ ಜಗತ್ಪ್ರಸಿದ್ಧ ಕೃತಿಯಾಗಿದ್ದು, ಶಾಸ್ತ್ರೀಯ ಕಾದಂಬರಿಯಾಗಿ ಜನಜನಿತವಾಗಿದೆ. ಇದರ ಒಂದು ಮಾತು 'ಕಾನೂನು ಕತ್ತೆ' (ದಿ ಲಾ ಐಸ್ ಆಸ್) ಯನ್ನು ಉಲ್ಲೇಖಿಸಿ ಕಟ್ಜು ಅವರು ಸುಪ್ರೀಂ ಕೋರ್ಟ್ ಆದೇಶವನ್ನು ತರಾಟೆಗೆ ತೆಗೆದುಕೊಂಡಿರುವುದು ಕನ್ನಡಿಗರ ವಾದಕ್ಕೆ ತುಸು ಬಲ ತಂದಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT