ದಿಗ್ವಿಜಯ್ ಸಿಂಗ್ 
ಪ್ರಧಾನ ಸುದ್ದಿ

ಕರ್ನಾಟಕ, ತಮಿಳುನಾಡು ನೀರಿನ ಅಗತ್ಯತೆಯನ್ನು ಕಡಿಮೆ ಮಾಡಿಕೊಳ್ಳಬೇಕು: ದಿಗ್ವಿಜಯ್ ಸಿಂಗ್

ಕಾವೇರಿ ನೀರಿನ ಹಂಚಿಕೆ ವಿವಾದದಲ್ಲಿ ಸಿಕ್ಕಿಹಾಕಿಕೊಂಡಿರುವ ಕರ್ನಾಟಕ ಮತ್ತು ತಮಿಳುನಾಡು ಸ್ವಲ್ಪ ಪ್ರಮಾಣದ ನೀರಿನ ಅಗತ್ಯತೆಯನ್ನು ಕಡಿಮೆ...

ಪಣಜಿ: ಕಾವೇರಿ ನೀರಿನ ಹಂಚಿಕೆ ವಿವಾದದಲ್ಲಿ ಸಿಕ್ಕಿಹಾಕಿಕೊಂಡಿರುವ ಕರ್ನಾಟಕ ಮತ್ತು ತಮಿಳುನಾಡು ಸ್ವಲ್ಪ ಪ್ರಮಾಣದ ನೀರಿನ ಅಗತ್ಯತೆಯನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ.
ಬರಗಾಲವಿದ್ದ ವರ್ಷದಲ್ಲಿ ಎರಡೂ ರಾಜ್ಯಗಳು ಪ್ರತಿ ರಾಜ್ಯಕ್ಕೂ ಸಿಗಬೇಕಾದ ನೀರಿನ ಪ್ರಮಾಣದ ಅಗತ್ಯತೆಯನ್ನು ಕಡಿಮೆ ಮಾಡಿಕೊಳ್ಳಬೇಕಾಗಿದ್ದು, ಆ ಪ್ರಕ್ರಿಯೆ ನಡೆಯುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ದುರದೃಷ್ಟಕರ ಅಂದರೆ ಜಲಾಶಯಗಳ ವಸ್ತು ಸ್ಥಿತಿಯನ್ನು ತಿಳಿಯದೇ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ನ್ಯಾಯಾಧೀಶರು ಸುಪ್ರೀಂ ಕೋರ್ಟ್ ಸ್ಥಾಪಿಸಿದ ಕಾವೇರಿ ಮೇಲುಸ್ತುವಾರಿ ಸಮಿತಿಯ ನಿರ್ಧಾರವನ್ನೂ ಕಡೆಗಣಿಸಿದ್ದಾರೆ ಎಂದರು.
ಇದೇ ವೇಳೆ ಕರ್ನಾಟಕ ಸರ್ಕಾರ ಕಾವೇರಿ ನೀರು ಕುಡಿಯಲು ಮಾತ್ರ ಬಳಕೆ ಮಾಡಲಾಗುವುದು ಎಂದು ವಿಶೇಷ ಅಧಿವೇಶನದಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿರುವುದು ಸುಪ್ರೀಂ ಕೋರ್ಟ್ ನಿರ್ಧಾರವನ್ನು ಪ್ರಶ್ನಿಸಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT