ಇರಿತಕ್ಕೊಳಗಾಗಿ ಮೃತಪಟ್ಟ ದೆಹಲಿ ಶಿಕ್ಷಕ ಮುಖೇಶ್ ಕುಮಾರ್ 
ಪ್ರಧಾನ ಸುದ್ದಿ

ಇರಿತಕ್ಕೊಳಗಾಗಿ ಮೃತಪಟ್ಟ ದೆಹಲಿ ಶಿಕ್ಷಕ ಕುಟುಂಬಕ್ಕೆ 1 ಕೋಟಿ ಪರಿಹಾರ: ಎಎಪಿ ಸರ್ಕಾರ

ಇಬ್ಬರು ವಿದ್ಯಾರ್ಥಿಗಳಿಂದ ಇರಿತಕ್ಕೆ ಒಳಗಾಗಿ ಇಂದು ಮೃತಪಟ್ಟ ಶಾಲಾ ಶಿಕ್ಷಕರೊಬ್ಬರ ಕುಟುಂಬಕ್ಕೆ 1 ಕೋಟಿ ರೂ ಪರಿಹಾರ ನೀಡುವುದಾಗಿ ದೆಹಲಿ ಸರ್ಕಾರ ಮಂಗಳವಾರ ಘೋಷಿಸಿದೆ.

ನವದೆಹಲಿ: ಇಬ್ಬರು ವಿದ್ಯಾರ್ಥಿಗಳಿಂದ ಇರಿತಕ್ಕೆ ಒಳಗಾಗಿ ಇಂದು ಮೃತಪಟ್ಟ ಶಾಲಾ ಶಿಕ್ಷಕರೊಬ್ಬರ ಕುಟುಂಬಕ್ಕೆ 1 ಕೋಟಿ ರೂ ಪರಿಹಾರ ನೀಡುವುದಾಗಿ ದೆಹಲಿ ಸರ್ಕಾರ ಮಂಗಳವಾರ ಘೋಷಿಸಿದೆ. 
ಶಾಲೆಯ ಹಾಜರಾತಿ ಕಡಿಮೆ ಇದೆ ಎಂಬ ಕಾರಣಕ್ಕೆ 12 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳನ್ನು ವಜಾ ಮಾಡಿದ್ದಕ್ಕೆ, ಉಳಿದ ಸಹ ವಿದ್ಯಾರ್ಥಿಗಳ ಎದುರಿಗೆ ಮುಖೇಶ್ ಕುಮಾರ್ ಎಂಬ ಸರ್ಕಾರಿ ಶಿಕ್ಷಕರನ್ನು ಈ ಇಬ್ಬರು ವಿದ್ಯಾರ್ಥಿಗಳು ಇರಿದಿದ್ದರು.
ಈ ದಾಳಿಯಾದ ಒಂದು ದಿನದ ನಂತರ ಮಂಗಳವಾರ ಆಸ್ಪತ್ರೆಯಲ್ಲಿ ಗಾಯಗೊಂಡ ಶಿಕ್ಷಕ ಕೊನೆಯುಸಿರೆಳೆದಿದ್ದರು. 
ಈ ಇಬ್ಬರು ವಿದ್ಯಾರ್ಥಿಗಳಲ್ಲಿ ಒಬ್ಬನು ಅಪ್ರಾಪ್ತನಾಗಿದ್ದು, ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. 
ರಾಜ್ಯ ಸರ್ಕಾರ ಕೂಡ ಈ ಪ್ರಕರಣದ ಬಗ್ಗೆ ಮೆಜೆಸ್ಟ್ರೇಟ್ ತನಿಖೆ ನಡೆಸಲು ಆದೇಶಿಸಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಧಿಯಾ ಹೇಳಿದ್ದಾರೆ. 
"ಕುಟುಂಬದ ದುಃಖಕ್ಕೆ ಯಾವುದೇ ಪರಿಹಾರ ಸಾಧ್ಯವಿಲ್ಲ... ಅವರ ಆರ್ಥಿಕ ನೆರವಿಗಾಗಿ ಶೀಘ್ರವೇ ಸರ್ಕಾರ 1 ಕೋಟಿ ನೀಡಲಿದೆ" ಎಂದು ಸಿಸೋಧಿಯಾ ಹೇಳಿದ್ದಾರೆ. 
"ಶಿಕ್ಷಕರಿಗೆ ಗೌರವ ನೀಡುವುದನ್ನು ಎಲ್ಲ ಪೋಷಕರು ಮಕ್ಕಳಿಗೆ ಬೆಳೆಸಬೇಕು" ಎಂದು ಕೂಡ ಅವರು ಕರೆ ಕೊಟ್ಟಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT