ಪ್ರಧಾನಿ ನರೇಂದ್ರ ಮೋದಿ ಹಾಗೂ ಸಾರ್ಕ್ ಶೃಂಗಸಭೆ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಪಾಕಿಸ್ತಾನ ಸಾರ್ಕ್ ಶೃಂಗಸಭೆಗೆ ಬಾಂಗ್ಲಾ, ಭೂತಾನ್ ಬಹಿಷ್ಕಾರ!

ಭಾರತದ ಬಳಿಕ ಸಾರ್ಕ್ ಶೃಂಗಸಭೆಗೆ ಬಾಂಗ್ಲಾದೇಶ, ಆಫ್ಘಾನಿಸ್ತಾನ ಹಾಗೂ ಭೂತಾನ್ ಸರ್ಕಾರಗಳು ಸಾರ್ಕ್ ಸಭೆಯನ್ನು ಬಹಿಷ್ಕರಿಸಿ ಪತ್ರ ಬರೆದಿವೆ.

ನವದೆಹಲಿ: ಉರಿ ಉಗ್ರ ದಾಳಿ ಕುರಿತಂತೆ ಪಾಕಿಸ್ತಾನದ ವಿರುದ್ಧ  ಭಾರತ ತನ್ನ ವಿರೋಧ ಮುಂದುವರೆಸಿದ್ದು, ಪಾಕಿಸ್ತಾನದಲ್ಲಿ ನಡೆಯುವ ಸಾರ್ಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು  ಹೇಳಿ ಸಭೆಯನ್ನು ಬಹಿಷ್ಕರಿಸಿತ್ತು. ಇದರ ಬೆನ್ನಲ್ಲೇ ಇತರೆ ಸಾರ್ಕ್ ರಾಷ್ಟ್ರಗಳೂ ಕೂಡ ಸಭೆಯನ್ನು ಬಹಿಷ್ಕರಿಸಿದ್ದು, ಬಾಂಗ್ಲಾದೇಶ, ಆಫ್ಘಾನಿಸ್ತಾನ ಹಾಗೂ ಭೂತಾನ್ ಸರ್ಕಾರಗಳು ಸಾರ್ಕ್  ಸಭೆಯನ್ನು ಬಹಿಷ್ಕರಿಸಿ ಪತ್ರ ಬರೆದಿವೆ.

ಇದೇ ನವೆಂಬರ್ 9 ಮತ್ತು 10ರಂದು ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದಿನಲ್ಲಿ ಸಾರ್ಕ್ ಶೃಂಗಸಭೆ ನಡೆಯಲಿದ್ದು, ಈಗಾಗಲೇ ಭಾರತ ಸರ್ಕಾರ ತಾನು ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ  ಎಂದು ಘೋಷಣೆ ಮಾಡಿದೆ. ಗಡಿಯಲ್ಲಿನ ಭಯೋತ್ಪಾದನೆಗೆ ಪಾಕಿಸ್ತಾನ ಕುಮ್ಮಕ್ಕು ನೀಡುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳಲು ತಾನು ಸಿದ್ಧವಿಲ್ಲ ಎಂದು ಹೇಳಿ ಭಾರತ  ಸಭೆಯಿಂದ ಹಿಂದೆ ಸರಿದಿತ್ತು.  ಇದೀಗ ಭಾರತದ ಬೆನ್ನಿಗೆ ನಿಂತಿರುವ ಬಾಂಗ್ಲಾದೇಶ, ಆಫ್ಘಾನಿಸ್ತಾನ ಹಾಗೂ ಭೂತಾನ್ ಸರ್ಕಾರಗಳು ತಾವೂ ಕೂಡ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು  ಪತ್ರಬರೆದಿವೆ.

ಇನ್ನು ತನ್ನ ನಿಲುವಿನ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಬಾಂಗ್ಲಾದೇಶ ಸರ್ಕಾರ, ತನ್ನ ದೇಶದ ಆಂತರಿಕ ವಿಚಾರಗಳಲ್ಲಿ ತಲೆ ಹಾಕುತ್ತಿರುವ ದೇಶದಲ್ಲಿ ಸಾರ್ಕ್ ಶೃಂಗಸಭೆ  ನಡೆಯುತ್ತಿರುವುದು ಸರಿಯಲ್ಲ. ಹೀಗಾಗಿ ತಾನು ಸಭೆಯನ್ನು ಬಹಿಷ್ಕರಿಸಿರುವುದಾಗಿ ಹೇಳಿದೆ. ಇಂತಹುದೇ ಕಾರಣ ಒಡ್ಡಿ ಆಫ್ಘಾನಿಸ್ತಾನ ಕೂಡ ಶೃಂಗಸಭೆಯಿಂದ ಹಿಂದೆ ಸರಿದಿದೆ.
 ಸಾರ್ಕ್ ಶೃಂಗಸಭೆ ನಡಾವಳಿಗಳ ಪ್ರಕಾರ ಒಕ್ಕೂಟದ ಯಾವುದೇ ಒಂದು ರಾಷ್ಟ್ರ ಸಭೆಯನ್ನು ಬಹಿಷ್ಕರಿಸಿದರೆ ಶೃಂಗಸಭೆ ರದ್ದಾಗುತ್ತದೆ. ಹೀಗಾಗಿ ಪಾಕಿಸ್ತಾನದಲ್ಲಿ ಯೋಜನೆಯಾಗಿದ್ದ 2016ರ  ಶೃಂಗಸಭೆ ರದ್ದಾಗುವುದು ಬಹುತೇಕ ಖಚಿತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT