ನೂತನ ಮೇಯರ್ ಜಿ ಪದ್ಮಾವತಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಬೆಂಗಳೂರು ಮೇಯರ್ ಆಗಿ ಜಿ.ಪದ್ಮಾವತಿ ಆಯ್ಕೆ

ಬಹು ನಿರೀಕ್ಷಿತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಕಾರ್ಪೋರೇಟರ್ ಜಿ.ಪದ್ಮಾವತಿ ಅವರು ಬುಧವಾರ ಆಯ್ಕೆಯಾಗಿದ್ದಾರೆ.

ಬೆಂಗಳೂರು: ಬಹು ನಿರೀಕ್ಷಿತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಕಾರ್ಪೋರೇಟರ್ ಜಿ.ಪದ್ಮಾವತಿ ಅವರು ಬುಧವಾರ ಆಯ್ಕೆಯಾಗಿದ್ದಾರೆ.

ಬಿಬಿಎಂಪಿ ಕಚೇರಿಯ ಕೆಂಪೇಗೌಡ ಸಭಾಂಗಣದಲ್ಲಿ ಇಂದು ನಡೆದ ಮೇಯರ್ ಆಯ್ಕೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಮೈತ್ರಿ ಮುಂದುವರೆದಿದ್ದು, ಜೆಡಿಎಸ್  ಕಾರ್ಪೋರೇಟರ್ ಗಳ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷದ ಜಿ ಪದ್ಮಾವತಿ ಅವರು ಆಯ್ಕೆಯಾಗಿದ್ದಾರೆ. ಮೇಯರ್ ಆಯ್ಕೆ ಪ್ರಕ್ರಿಯೆ ವೇಳೆ ಜಿಲ್ಲಾಧಿಕಾರಿ ವಿ.ಶಂಕರ್ ಹಾಗೂ ಹಾಲಿ ಮೇಯರ್  ಮಂಜುನಾಥ್ ರೆಡ್ಡಿ ಉಪಸ್ಥಿತರಿದ್ದರು. ಪ್ರಾದೇಶಿಕ ಆಯುಕ್ತೆ ಎಂ ವಿ ಜಯಂತಿ ಅವರು ಮೇಯರ್ ಆಯ್ಕೆ ಪ್ರಕ್ರಿಯೆ ನಡೆಸಿದರೆ.

ಎಲ್ಲ ಕಾರ್ಪೋರೇಟರ್ ಗಳು ಕೈ ಎತ್ತುವ ಮೂಲಕ ಪರ ಮತ್ತು ವಿರೋಧ ಮತಗಳನ್ನು ಚಲಾಯಿಸಿದರು. ಮತದಾನದ ಬಳಿಕ ಎಲ್ಲ ಕಾರ್ಪೋರೇಟರ್ ಗಳು ನಡಾವಳಿ ಪುಸ್ತಿಕೆಗೆ ಸಹಿ ಹಾಕಿದರು.  ಮತದಾನದಲ್ಲಿ 28 ಶಾಸಕರು, 28 ಎಂಎಲ್ ಸಿಗಳು, 11 ರಾಜ್ಯಸಭಾ ಸದಸ್ಯರು, 5 ಲೋಕಸಭಾ ಸದಸ್ಯರು ಪಾಲ್ಗೊಂಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ಜಿ.ಪದ್ಮಾವತಿ ಅವರ ಪರ ಒಟ್ಟು 142 ಮತಗಳನ್ನು ಗಳಿಸಿದರೆ, ಅವರ ಪ್ರತಿಸ್ಪರ್ಧಿ ಬಿಜೆಪಿಯ ಡಿಹೆಚ್ ಲಕ್ಷ್ಮಿ ಅವರು 120 ಮತಗಳನ್ನು ಗಳಿಸಿ ಪರಾಭವಗೊಂಡರು.

ಇದಕ್ಕೂ ಮೊದಲು ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಮೇಯರ್ ಅಭ್ಯರ್ಥಿ ಆಯ್ಕೆ ನಡೆಯಿತು. ತೀವ್ರ ಕುತೂಹಲ ಕೆರಳಿಸಿದ್ದ ಈ ಆಯ್ಕೆ ಪ್ರಕ್ರಿಯೆಲ್ಲಿ  ಕಾಂಗ್ರೆಸ್ ಪಕ್ಷದ ಪ್ರಕಾಶ್‌ನಗರ ವಾರ್ಡ್‌ನ ಕಾರ್ಪೋರೇಟರ್ ಜಿ ಪದ್ಮಾವತಿ ಹಾಗೂ ಶಾಂತಿನಗರ ವಾರ್ಡ್‌ನ ಪಿ ಸೌಮ್ಯ ಶಿವಕುಮಾರ್‌ ನಡುವೆ ತೀವ್ರ ಪೈಪೋಟಿ ಎದುರಾಗಿತ್ತು. ಜೆಡಿಎಸ್  ಸದಸ್ಯರು ಕೂಡ ಸೌಮ್ಯ ಶಿವಕುಮಾರ್ ಅವರಿಗೆ ಬೆಂಬಲ ಸೂಚಿಸಿದ್ದರು. ಆದರೆ ಅಂತಿಮ ಘಟ್ಟದಲ್ಲಿ ಕಾಂಗ್ರೆಸ್ ನಾಯಕರು ಜಿ ಪದ್ಮಾವತಿ ಅವರನ್ನೇ ಕಾಂಗ್ರೆಸ್ ಪಕ್ಷದ ಅಧಿಕೃತ  ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಯಿತು.

ಬಳಿಕ ಮಾತನಾಡಿದ ಮೇಯರ್ ಹುದ್ದೆ ಆಕಾಂಕ್ಷಿಯಾಗಿದ್ದ ಶಾಂತಿನಗರ ವಾರ್ಡ್‌ನ ಪಿ ಸೌಮ್ಯ ಶಿವಕುಮಾರ್‌ ಅವರು ಪಕ್ಷದ ತೀರ್ಮಾನವೇ ಅಂತಿಮ ಎಂದು ಹೇಳುವ ಮೂಲಕ ಮೇಯರ್  ಕಣದಿಂದ ಹಿಂದೆ ಸರಿದಿರುವುದಾಗಿ ಪರೋಕ್ಷವಾಗಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT