ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ದಾವಣಗೆರೆ ಎಸಿ, ತಹಶೀಲ್ದಾರ್‌ ಮೇಲೆ ಲಾರಿ ಹತ್ತಿಸಿ ಹತ್ಯೆಗೆ ಯತ್ನ, ರೈಸ್ ಮಿಲ್ ಮಾಲೀಕ, ಪುತ್ರನ ಬಂಧನ

ಉಡುಪಿ ಜಿಲ್ಲಾಧಿಕಾರಿ ಹಾಗೂ ಉಪ ವಿಭಾಗ ಅಧಿಕಾರಿಯ ಹತ್ಯೆ ಯತ್ನ ಪ್ರಕರಣ ಮಾಸುವ ಮುನ್ನವೇ ದಾವಣಗೆರೆ ಉಪ ವಿಭಾಗ ಅಧಿಕಾರಿ...

ದಾವಣಗೆರೆ: ಉಡುಪಿ ಜಿಲ್ಲಾಧಿಕಾರಿ ಹಾಗೂ ಉಪ ವಿಭಾಗ ಅಧಿಕಾರಿಯ ಹತ್ಯೆ ಯತ್ನ ಪ್ರಕರಣ ಮಾಸುವ ಮುನ್ನವೇ ದಾವಣಗೆರೆ ಉಪ ವಿಭಾಗ ಅಧಿಕಾರಿ ಹಾಗೂ ತಹಶೀಲ್ದಾರ್ ಮೇಲೆ ಲಾರಿ ಹತ್ತಿಸಿ ಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ನಡೆದಿದೆ.
ದಾವಣಗೆರೆ ತಾಲೂಕಿನ ಹಳೇಬಾತಿ ಗ್ರಾಮದಲ್ಲಿ ಅಕ್ರಮವಾಗಿ ಅನ್ನಭಾಗ್ಯ ಪಡಿತರ ಅಕ್ಕಿಯನ್ನು ಸಂಗ್ರಹಿಸಿಟ್ಟ ಗೋದಾಮಿನ ಮೇಲೆ ಉಪ ವಿಭಾಗಾಧಿಕಾರಿ ಕುಮಾರಸ್ವಾಮಿ ಮತ್ತು ತಹಶೀಲ್ದಾರ್‌ ಸಂತೋಷ್‌ ಕುಮಾರ್‌ ಅವರು ದಾಳಿ ನಡೆಸಿದ್ದು, ಈ ವೇಳೆ ಇಬ್ಬರ ಮೇಲೆ ಲಾರಿ ಹತ್ತಿಸಲೆತ್ನಿಸಿ ದಂಧೆಕೋರರು ಅಟ್ಟಹಾಸಗೈದಿದ್ದಾರೆ.
ಉಮಾಪತಿ ಎಂಬುವವರಿಗೆ ಸೇರಿದ್ದ ರೈಸ್ ಮಿಲ್ ಮೇಲೆ ಕುಮಾರಸ್ವಾಮಿ ಮತ್ತು ಸಂತೋಷ್‌ ಕುಮಾರ್‌ ಅವರು ಇಂದು ದಿಢೀರ್‌ ದಾಳಿ ನಡೆಸಿ, ಲಾರಿ ತಡೆದಾಗ, ಚಾಲಕ ಲಾರಿಯನ್ನು ನಿಲ್ಲಿಸದೆ ಮೈಮೇಲೆ ಹತ್ತಿಸಲೆತ್ನಿಸದ್ದಾನೆ. ರೈಸ್ ಮಿಲ್ ಮಾಲೀಕ ಹಾಗೂ ಚಾಲಕ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ.
ತಹಶೀಲ್ದಾರ್ ಸಂತೋಷ್ ಕುಮಾರ್ ಮೇಲೆ ರೈಸ್ ಮಿಲ್ ಮಾಲೀಕ ಉಮಾಪತಿ ಹಾಗೂ ಈತನ ಪುತ್ರ ಪ್ರಶಾಂತ್ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮಾಲೀಕ ಉಮಾಪತಿ ಹಾಗೂ ಆತನ ಮಗ ಪ್ರಶಾಂತ್ ನನ್ನ ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT