ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ದಾವಣಗೆರೆ ಎಸಿ, ತಹಶೀಲ್ದಾರ್‌ ಮೇಲೆ ಲಾರಿ ಹತ್ತಿಸಿ ಹತ್ಯೆಗೆ ಯತ್ನ, ರೈಸ್ ಮಿಲ್ ಮಾಲೀಕ, ಪುತ್ರನ ಬಂಧನ

ಉಡುಪಿ ಜಿಲ್ಲಾಧಿಕಾರಿ ಹಾಗೂ ಉಪ ವಿಭಾಗ ಅಧಿಕಾರಿಯ ಹತ್ಯೆ ಯತ್ನ ಪ್ರಕರಣ ಮಾಸುವ ಮುನ್ನವೇ ದಾವಣಗೆರೆ ಉಪ ವಿಭಾಗ ಅಧಿಕಾರಿ...

ದಾವಣಗೆರೆ: ಉಡುಪಿ ಜಿಲ್ಲಾಧಿಕಾರಿ ಹಾಗೂ ಉಪ ವಿಭಾಗ ಅಧಿಕಾರಿಯ ಹತ್ಯೆ ಯತ್ನ ಪ್ರಕರಣ ಮಾಸುವ ಮುನ್ನವೇ ದಾವಣಗೆರೆ ಉಪ ವಿಭಾಗ ಅಧಿಕಾರಿ ಹಾಗೂ ತಹಶೀಲ್ದಾರ್ ಮೇಲೆ ಲಾರಿ ಹತ್ತಿಸಿ ಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ನಡೆದಿದೆ.
ದಾವಣಗೆರೆ ತಾಲೂಕಿನ ಹಳೇಬಾತಿ ಗ್ರಾಮದಲ್ಲಿ ಅಕ್ರಮವಾಗಿ ಅನ್ನಭಾಗ್ಯ ಪಡಿತರ ಅಕ್ಕಿಯನ್ನು ಸಂಗ್ರಹಿಸಿಟ್ಟ ಗೋದಾಮಿನ ಮೇಲೆ ಉಪ ವಿಭಾಗಾಧಿಕಾರಿ ಕುಮಾರಸ್ವಾಮಿ ಮತ್ತು ತಹಶೀಲ್ದಾರ್‌ ಸಂತೋಷ್‌ ಕುಮಾರ್‌ ಅವರು ದಾಳಿ ನಡೆಸಿದ್ದು, ಈ ವೇಳೆ ಇಬ್ಬರ ಮೇಲೆ ಲಾರಿ ಹತ್ತಿಸಲೆತ್ನಿಸಿ ದಂಧೆಕೋರರು ಅಟ್ಟಹಾಸಗೈದಿದ್ದಾರೆ.
ಉಮಾಪತಿ ಎಂಬುವವರಿಗೆ ಸೇರಿದ್ದ ರೈಸ್ ಮಿಲ್ ಮೇಲೆ ಕುಮಾರಸ್ವಾಮಿ ಮತ್ತು ಸಂತೋಷ್‌ ಕುಮಾರ್‌ ಅವರು ಇಂದು ದಿಢೀರ್‌ ದಾಳಿ ನಡೆಸಿ, ಲಾರಿ ತಡೆದಾಗ, ಚಾಲಕ ಲಾರಿಯನ್ನು ನಿಲ್ಲಿಸದೆ ಮೈಮೇಲೆ ಹತ್ತಿಸಲೆತ್ನಿಸದ್ದಾನೆ. ರೈಸ್ ಮಿಲ್ ಮಾಲೀಕ ಹಾಗೂ ಚಾಲಕ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ.
ತಹಶೀಲ್ದಾರ್ ಸಂತೋಷ್ ಕುಮಾರ್ ಮೇಲೆ ರೈಸ್ ಮಿಲ್ ಮಾಲೀಕ ಉಮಾಪತಿ ಹಾಗೂ ಈತನ ಪುತ್ರ ಪ್ರಶಾಂತ್ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮಾಲೀಕ ಉಮಾಪತಿ ಹಾಗೂ ಆತನ ಮಗ ಪ್ರಶಾಂತ್ ನನ್ನ ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT