ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ 
ಪ್ರಧಾನ ಸುದ್ದಿ

ಜಾತಿ, ಧರ್ಮ, ಬಣ್ಣದ ಹೆಸರಿನಲ್ಲಿ ಯಾವುದೇ ತಾರತಮ್ಯ ಇಲ್ಲ: ರಾಜನಾಥ್

ಜಾತಿ, ಸಮುದಾಯ, ಧರ್ಮ ಮತ್ತು ಬಣ್ಣದ ಆಧಾರದ ಮೇಲೆ ಭಾರತ ತನ್ನ ನಾಗರಿಕರ ವಿರುದ್ಧ ಎಂದಿಗೂ ತಾರತಮ್ಯ ಎಸಗಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್

ನವದೆಹಲಿ: ಜಾತಿ, ಸಮುದಾಯ, ಧರ್ಮ ಮತ್ತು ಬಣ್ಣದ ಆಧಾರದ ಮೇಲೆ ಭಾರತ ತನ್ನ ನಾಗರಿಕರ ವಿರುದ್ಧ ಎಂದಿಗೂ ತಾರತಮ್ಯ ಎಸಗಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಸೋಮವಾರ ಹೇಳಿದ್ದಾರೆ.  
ದಕ್ಷಿಣ ಭಾರತೀಯರ ಬಣ್ಣದ ಕುರಿತು ಅವಹೇಳನಾಕಾರಿ ಮತ್ತು ಜನಾಂಗೀಯ ನಿಂದನೆಯ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ಮಾಜಿ ರಾಜ್ಯಸಭಾ ಸದಸ್ಯ ತರುಣ್ ವಿಜಯ್ ವಿಷಯವಾಗಿ ಲೋಕಸಭೆಯಲ್ಲಿ ವಿರೋಧಪಕ್ಷದ ಸದಸ್ಯರು ಗೊಂದಲ ಎಬ್ಬಿಸಿದ್ದರಿಂದ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. 
"ಈ ದೇಶದ ಎಂದೆಂದಿಗೂ ನಾಗರಿಕರನ್ನು ಜಾತಿ, ಸಮುದಾಯ ಮತ್ತು ಬಣ್ಣದ ಆಧಾರದ ಮೇಲೆ ತಾರತಮ್ಯ ಮಾಡಲು ಬಿಡುವುದಿಲ್ಲ" ಎಂದು ಸಿಂಗ್ ಹೇಳಿದ್ದಾರೆ. 
ಅವರು (ವಿಜಯ್) ಈಗಾಗಲೇ ಕ್ಷಮೆ ಯಾಚಿಸಿದ್ದಾರೆ ಎಂದಿರುವ ಸಿಂಗ್ ಆ ಹೇಳಿಕೆಗಳು ಸಮರ್ಥನೀಯವಲ್ಲ ಎಂದಿದ್ದಾರೆ. 
"ಅವರು ಈಗಾಗಲೇ ಕ್ಷಮೆ ಯಾಚಿಸಿರುವುದರಿಂದ ಅದರ ಬಗ್ಗೆ ಮತ್ತೆ ಪ್ರಶ್ನೆಗಳನ್ನು ಎತ್ತುವ ಅವಶ್ಯಕತೆಯಿಲ್ಲ" ಎಂದು ಕೂಡ ಸಿಂಗ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ಬ್ರದರ್ ನಿಮಗೆ ತೊಂದರೆಯಾಗಿದ್ದರೆ ಇರಾನ್‌ಗೆ ಹೋಗಿ ಹೋರಾಡಿ: ಯುಪಿ ಪೊಲೀಸ್ ಅಧಿಕಾರಿ ಹೀಗೆ ಹೇಳಿದ್ದು ಯಾರಿಗೆ?

ಬಿಕ್ಲು ಶಿವ ಕೊಲೆ ಪ್ರಕರಣ: ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಜಾಮೀನು

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಬಂದ್! ಇಂದಿರಾ ಕ್ಯಾಂಟೀನ್ ನಡೆಯುತ್ತಾ?

SCROLL FOR NEXT