ಕುಲಭೂಷಣ್ ಜಾಧವ್ 
ಪ್ರಧಾನ ಸುದ್ದಿ

ಜಾಧವ್ ಅವರನ್ನು ತುರ್ತಾಗಿ ನೇಣಿಗೇರಿಸುವುದಿಲ್ಲ ಎಂದ ಪಾಕಿಸ್ತಾನ

ಭಾರತೀಯ ಗೂಢಾಚಾರಿ ಎಂದು ಆರೋಪಿಸಿ ಪಾಕಿಸ್ತಾನಾದ ಮಿಲಿಟರಿ ಕೋರ್ಟ್ ನಿಂದ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್ ಅವರನ್ನು ಕೂಡಲೇ ನೇಣಿಗೇರಿಸುವುದಿಲ್ಲ ಎಂದು ಭದ್ರತಾ ಸಚಿವ

ಇಸ್ಲಮಾಬಾದ್: ಭಾರತೀಯ ಗೂಢಾಚಾರಿ ಎಂದು ಆರೋಪಿಸಿ ಪಾಕಿಸ್ತಾನಾದ ಮಿಲಿಟರಿ ಕೋರ್ಟ್ ನಿಂದ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್ ಅವರನ್ನು ಕೂಡಲೇ ನೇಣಿಗೇರಿಸುವುದಿಲ್ಲ ಎಂದು ಭದ್ರತಾ ಸಚಿವ ಖವಾಜ ಮೊಹಮದ್ ಆಸೀಫ್ ಹೇಳಿದ್ದಾರೆ. 
ಜಾಧವ್ ಅವರಿಗೆ ನೀಡಿರುವ ಶಿಕ್ಷೆಯ ವಿರುದ್ಧ ಮನವಿ ಮಾಡಿಕೊಳ್ಳಲು ಇನ್ನು ಮೂರು ಅವಕಾಶಗಳಿವೆ ಎಂದು ಡಾನ್ ಆನ್ಲೈನ್ ವರದಿ ಮಾಡಿದೆ. ಜಾಧವ್ ಅವರ ಕುಟುಂಬ ಮುಂಬೈನಲ್ಲಿ ನೆಲೆಸಿದೆ. 
ಸಚಿವರು ಹೇಳಿರುವಂತೆ ಜಾಧವ್ ಅವರ ವಿಚಾರಣೆ ಮೂರುವರೆ ತಿಂಗಳು ನಡೆಸಲಾಗಿದೆ ಎಂದಿದ್ದಾರೆ. ಜಾಧವ್ ಆರ್ ಎ ಡಬ್ಲ್ಯೂ ಗಾಗಿ ಕೆಲಸ ಮಾಡುತ್ತಿದ್ದರು ಎಂದು ಆರೋಪಿಸಿದ್ದು, ಬಲೂಚಿಸ್ಥಾನದಿಂದ ಮಾರ್ಚ್ ೨೦೧೬ ರಂದು ಬಂಧಿಸಿದ್ದಾಗಿ ಅವರು ತಿಳಿಸಿದ್ದಾರೆ. 
ಭಾರತದ ಪರವಾಗಿ ಗೂಢಾಚಾರಿ ಮಾಡಿರುವುದು, ಪಾಕಿಸ್ತಾನದ ವಿರುದ್ಧ ಭಯೋತ್ಪಾದನೆಗೆ ಕುಮ್ಮಕ್ಕು ನೀಡಿ ಸಾರ್ವಭೌಮತೆಗೆ ಧಕ್ಕೆ ತಂದು ದೇಶದ ಸ್ಥಿರತೆಗೆ ಧಕ್ಕೆ ತಂದ ಆರೋಪವನ್ನು ಜಾಧವ್ ಮೇಲೆ ಹೊರಿಸಲಾಗಿದೆ. 
೬೦ ದಿನಗಳೊಳಳಗೆ ಪಾಕಿಸ್ತಾನ ಮಿಲಿಟರಿ ನ್ಯಾಯಾಲಯದ ತೀರ್ಪಿನ ವಿರುದ್ಧ ಮನವಿ ಸಲ್ಲಲಿಸುವ ಅವಕಾಶ ಜಾಧವ್ ಗೆ ಇದ್ದು, ಸೇನಾ ಮುಖ್ಯಸ್ಥ ಮತ್ತು ರಾಷ್ಟ್ರಪತಿಗಳಿಗೆ ಕ್ಷಮಾಪಣೆ ಅರ್ಜಿಯನ್ನು ಕೂಡ ಸಲ್ಲಿಸಬಹುದಾಗಿದೆ ಎಂದು ಆಸಿಫ್ ಹೇಳಿದ್ದಾರೆ. 
ಜಾಧವ್ ಅವರ ವಿರುದ್ಧ ನೀಡಿರುವ ಗಲ್ಲು ಶಿಕ್ಷೆ 'ಪೂರ್ವ ನಿಯೋಜಿತ ಕೊಲೆ' ಎಂದು ಭಾರತ ಆರೋಪಿಸಿರುವುದನ್ನು ತಳ್ಳಿ ಹಾಕಿರುವ ಆಸಿಫ್ ಕಾನೂನನ್ನು ಅನುಸರಿಸಿದ್ದು, ವಿಚಾರಣೆ ನಡೆಸಲಾಗಿದೆ ಎಂದಿದ್ದಾರೆ. 
ಪಾಕಿಸ್ತಾನದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಿ ಭದ್ರತೆ ಮತ್ತು ಸಾರ್ವಭೌಮತೆಗೆ ಧಕ್ಕೆ ತರುವವರಿಗೆ, ಅವರು ದೇಶದ ಒಳಗೆ ವಾಸವಿದ್ದರು ಅಥವಾ ಹೊರಗಿದ್ದರು ಯಾವುದೇ ರೀತಿಯ ವಿನಾಯಿತಿ ನೀಡುವುದಿಲ್ಲ ಎಂದು ಸಚಿವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT