ಪ್ರಧಾನ ಸುದ್ದಿ

ಜಲಿಯನ್ ವಾಲಾ ಭಾಗ್ ಹತ್ಯಾಕಾಂಡದ ಹುತಾತ್ಮರನ್ನು ಮರೆಯಲಾಗದು: ಮೋದಿ

Guruprasad Narayana
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ನ ಜಲಿಯನ್ ವಾಲಾ ಭಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗುರುವಾರ ಗೌರವ ಸಲ್ಲಿಸಿದ್ದು, ಅವರ ಧೀರೋದ್ಧಾತತೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ. 
"ಜಲಿಯನ್ ವಾಲಾಭಾಗ್ ಹತ್ಯಾಕಾಂಡದ ಹುತಾತ್ಮರಿಗೆ ಈ ಮೂಲಕ ನಮಸ್ಕಾರ ಸಲ್ಲಿಸುತ್ತಿದ್ದೇನೆ. ಅವರ ಧೈರ್ಯ ಮತ್ತು ಧೀರೋದ್ಧಾತತೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ. 
೧೩, ಏಪ್ರಿಲ್ ೧೯೧೯ ರಲ್ಲಿ ಅಮೃತಸರದ ಜಲಿಯನ್ ವಾಲಾಭಾಗ್ ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿದ್ದ ಗುಂಪಿನ ಮೇಲೆ ಬ್ರಿಟಿಷ್ ಇಂಡಿಯನ್ ಆರ್ಮಿ ಗುಂಡಿನ ಮಳೆಗರೆದು ಮಾರಣಹೋಮಕ್ಕೆ ಕಾರಣವಾಗಿತ್ತು.
SCROLL FOR NEXT