ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಜಿಎಸ್ ಟಿ ಮಸೂದೆಗಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ

ಬಹು ನಿರೀಕ್ಷಿತ ಎಕರೂಪದ ತೆರಿಗೆ ನೀತಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ)ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಗುರುವಾರ ಅಂಕಿತ ಹಾಕಿದ್ದಾರೆ.

ನವದೆಹಲಿ: ಬಹು ನಿರೀಕ್ಷಿತ ಎಕರೂಪದ ತೆರಿಗೆ ನೀತಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ)ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಗುರುವಾರ ಅಂಕಿತ ಹಾಕಿದ್ದಾರೆ.

ಸಂಸತ್ ನ ಉಭಯ ಕಲಾಪಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಕೇಂದ್ರ ಸರ್ಕಾರದ ಉದ್ದೇಶಿತ ಜಿಎಸ್ ಟಿ ಮಸೂದೆ ಹಲವು ತಿದ್ದುಪಡಿಗಳೊಂದಿಗೆ ಉಭಯ ಸದನಗಳ ಅನುಮೋದನೆ ಪಡೆದಿತ್ತು. ಇದೀಗ ಈ ಮಹತ್ವಾಕಾಂಕ್ಷಿ  ಮಸೂದೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅಂಕಿತ ಹಾಕಿದ್ದು, ಇನ್ನು ದೇಶಾದ್ಯಂತ ಏಕರೂಪದ ತೆರಿಗೆ ನೀತಿ ಜಾರಿಯಾಗಲಿದೆ. ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ ಇದೇ ಜುಲೈ 1ರಿಂದ ಜಿಎಸ್ ಟಿ ಮಸೂದೆ  ದೇಶಾದ್ಯಂತ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.

ಕಳೆದ ಮಾರ್ಚ್ 29ರಂದು ಲೋಕಸಭೆಯಲ್ಲಿ ಸತತ 8 ಗಂಟೆಗಳ ಕಾಲ ಚರ್ಚೆಗೀಡಾಗಿದ್ದ ಜಿಎಸ್ ಟಿ ಮಸೂದೆಯನ್ನು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದರು. ಬಳಿಕ ಏಪ್ರಿಲ್ 6ರಂದು ರಾಜ್ಯಸಭೆಯಲ್ಲಿ ಕೇಂದ್ರ ಸರಕು  ಮತ್ತು ಸೇವಾ ತೆರಿಗೆ ಮಸೂದೆ (ಸಿ.ಜಿ.ಎಸ್.ಟಿ) ಮಸೂದೆ 2017, ಏಕೀಕೃತ ಸರಕು ಮತ್ತು ಸೇವಾ ತೆರಿಗೆ ಮಸೂದೆ-2017, ಕೇಂದ್ರಾಡಳಿತ ಪ್ರದೇಶ ಸರಕು  ಮತ್ತು ಸೇವಾ ತೆರಿಗೆ ಮಸೂದೆ-2017, ಜಿಎಸ್ ಟಿ ಮಸೂದೆ (ರಾಜ್ಯಗಳಿಗೆ  ಪರಿಹಾರ ನೀಡುವ ಮಸೂದೆ)-2017 ಗಳನ್ನು ಅಂಗೀಕರಿಸಲಾಗಿತ್ತು.

ಕೇಂದ್ರ ಮತ್ತು ಏಕೀಕೃತ ಜಿಎಸ್ ಟಿ ಮಸೂದೆಯು ದೇಶವ್ಯಾಪಿ ಏಕರೂಪದ ದಂಡ ಮತ್ತು ತೆರಿಗೆ ಸಂಗ್ರಹಿಸುವ ಕಾನೂನಾಗಿದ್ದು, ಜಿಎಸ್ ಟಿ ಪರಿಹಾರ ಮಸೂದೆಯೂ ಜಿಎಸ್ ಟಿ ಜಾರಿ  ಬಳಿಕ ರಾಜ್ಯ ಸರ್ಕಾರಗಳಿಗಾಗುವ   ನಷ್ಟವನ್ನು ಭರಿಸುವ ಮತ್ತು ಪರಿಹಾರ ನೀಡುವ ಮಸೂದೆಯಾಗಿದೆ. ಇದು ಕೇಂದ್ರಾಡಳಿತ ಪ್ರದೇಶಕ್ಕೂ ಅನ್ವಯವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT