ಸಂಗ್ರಹ ಚಿತ್ರ 
ಪ್ರಧಾನ ಸುದ್ದಿ

ಜಿಲ್ಲಾ ಮಟ್ಟದಲ್ಲಿ "ತ್ರಿವಳಿ ತಲ್ಲಾಖ್" ಸಮಸ್ಯೆ ಪರಿಷ್ಕರಿಸಬೇಕಿದೆ: ಪ್ರಧಾನಿ ಮೋದಿ

ಮುಸ್ಲಿಂ ಮಹಿಳೆಯರ ಪಾಲಿಗೆ ದೊಡ್ಡ ಪಿಡುಗಾಗಿ ಮಾರ್ಪಟ್ಟಿರುವ ತ್ರಿವಳಿ ತಲ್ಲಾಖ್ ಅನ್ನು ತಳಮಟ್ಟದಿಂದ ಪರಿಷ್ಕರಿಸ ಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಮುಸ್ಲಿಂ ಮಹಿಳೆಯರ ಪಾಲಿಗೆ ದೊಡ್ಡ  ಪಿಡುಗಾಗಿ ಮಾರ್ಪಟ್ಟಿರುವ ತ್ರಿವಳಿ ತಲ್ಲಾಖ್ ಅನ್ನು ತಳಮಟ್ಟದಿಂದ ಪರಿಷ್ಕರಿಸ ಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೆಹಲಿಯಲ್ಲಿ ಭಾನುವಾರ ನಡೆದ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ನಮ್ಮ ಮುಸ್ಲಿಂ ಸಹೋದರಿಯರಿಗೂ ನ್ಯಾಯ ಸಿಗಲೇಬೇಕಿದೆ.  ನಾವು ಜಿಲ್ಲಾ ಮಟ್ಟದಿಂದಲೇ ಈ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕಿದೆ. ನವಭಾರತ ನಿರ್ಮಾಣಕ್ಕೆ ನಮ್ಮ ಮುಂದಿನ ಹೆಜ್ಜೆಗಳನ್ನು ವೇಗವಾಗಿ ಇಡಬೇಕಿದ್ದು, ಹಿಂದುಳಿದ ಮುಸ್ಲಿಂ ಮಹಿಳೆಯರೊಂದಿಗೆ ಈ ಬಗ್ಗೆ ಚರ್ಚೆ  ನಡೆಸಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಮೋದಿ ಕರೆ ನೀಡಿದ್ದಾರೆ.

ಮುಸ್ಲಿಂ ಮಹಿಳೆಯರ ರಕ್ಷಣೆಗಾಗಿ ಸರ್ಕಾರದ ಕಾನೂನಿನಲ್ಲಿ ಕೆಲ ಸೆಕ್ಷನ್ ಗಳಿದ್ದು, ಈ ಬಗ್ಗೆಯೂ ಕೂಡ ಅಮೂಲಾಗ್ರ ಚರ್ಚೆ ನಡೆಯಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇನ್ನು ಈಗಾಗಲೇ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ತ್ರಿವಳಿ ತಲ್ಲಾಖ್ ಬಗ್ಗೆ ಕಠಿಣ ನಿಲುವು ತಳೆದಿದ್ದು, ಸೂಕ್ತ ಕಾರಣಗಳನ್ನು ನೀಡದೇ ತಲ್ಲಾಖ್ ನೀಡಿದರೆ  ಅಂತಹವರನ್ನು ಸಮಾಜದಿಂದ ಬಹಿಷ್ಕರಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT